<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿವಿಲಾಸ ಜಲಾಶಯಕ್ಕೆ ಜುಲೈ 30ರ ಒಳಗೆ ಭದ್ರಾ ಜಲಾಶಯದಿಂದ ನೀರು ಹರಿಸದಿದ್ದರೆ ಅಂದು ನಗರದಲ್ಲಿರುವ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಕಚೇರಿಗೆ ಬೀಗ ಜಡಿದು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.</p>.<p>ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೀರು ಬಿಡುಗಡೆಗೆ ಆಗ್ರಹಿಸಿ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯನ್ನು ಕೆಲಹೊತ್ತು ತಡೆದು ಪ್ರತಿಭಟನೆ ನಡೆಸಿದ ನಂತರ ತಹಶೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸಾರ್ವಜನಿಕರ ಸೇವಕರಾಗಿರುವ ಅಧಿಕಾರಿಗಳು ಸಬೂಬು ಹೇಳದೆ ನೀರು ಬಿಡುವ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲಿಸಬೇಕು. ಯಾರ ಒತ್ತಡಕ್ಕೂ ಮಣಿಯದೆ ನಾಲ್ಕು ತಿಂಗಳು ನಿರಂತರವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ರೈತರ ತಾಳ್ಮೆಯ ಕಟ್ಟೆ ಒಡೆಯುತ್ತದೆ’ ಎಂದು ಎಚ್ಚರಿಸಿದರು.</p>.<p>ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಶಿವಣ್ಣ, ತಿಮ್ಮಾರೆಡ್ಡಿ, ಸೈಯದ್ ಮುನ್ನಾ, ಹನುಮಂತರಾಯ, ಹನುಮಂತಪ್ಪ, ಟಿ. ಚಂದ್ರಪ್ಪ, ಎನ್. ನಾಗೇಂದ್ರಪ್ಪ, ಷಣ್ಮುಖಪ್ಪ, ಕರಿಯಣ್ಣ, ಯಲ್ಲಪ್ಪ, ಎಚ್. ರಂಗಸ್ವಾಮಿ, ಎಚ್. ರಾಮಯ್ಯ, ತಿಮ್ಮಣ್ಣ, ಆದಿರಾಳು ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿವಿಲಾಸ ಜಲಾಶಯಕ್ಕೆ ಜುಲೈ 30ರ ಒಳಗೆ ಭದ್ರಾ ಜಲಾಶಯದಿಂದ ನೀರು ಹರಿಸದಿದ್ದರೆ ಅಂದು ನಗರದಲ್ಲಿರುವ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಕಚೇರಿಗೆ ಬೀಗ ಜಡಿದು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.</p>.<p>ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೀರು ಬಿಡುಗಡೆಗೆ ಆಗ್ರಹಿಸಿ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯನ್ನು ಕೆಲಹೊತ್ತು ತಡೆದು ಪ್ರತಿಭಟನೆ ನಡೆಸಿದ ನಂತರ ತಹಶೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸಾರ್ವಜನಿಕರ ಸೇವಕರಾಗಿರುವ ಅಧಿಕಾರಿಗಳು ಸಬೂಬು ಹೇಳದೆ ನೀರು ಬಿಡುವ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲಿಸಬೇಕು. ಯಾರ ಒತ್ತಡಕ್ಕೂ ಮಣಿಯದೆ ನಾಲ್ಕು ತಿಂಗಳು ನಿರಂತರವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ರೈತರ ತಾಳ್ಮೆಯ ಕಟ್ಟೆ ಒಡೆಯುತ್ತದೆ’ ಎಂದು ಎಚ್ಚರಿಸಿದರು.</p>.<p>ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಶಿವಣ್ಣ, ತಿಮ್ಮಾರೆಡ್ಡಿ, ಸೈಯದ್ ಮುನ್ನಾ, ಹನುಮಂತರಾಯ, ಹನುಮಂತಪ್ಪ, ಟಿ. ಚಂದ್ರಪ್ಪ, ಎನ್. ನಾಗೇಂದ್ರಪ್ಪ, ಷಣ್ಮುಖಪ್ಪ, ಕರಿಯಣ್ಣ, ಯಲ್ಲಪ್ಪ, ಎಚ್. ರಂಗಸ್ವಾಮಿ, ಎಚ್. ರಾಮಯ್ಯ, ತಿಮ್ಮಣ್ಣ, ಆದಿರಾಳು ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>