<p><strong>ಚಿತ್ರದುರ್ಗ:</strong> ‘ರೋಗ ತಡೆಗಟ್ಟುವಿಕೆ, ಹರಡುವಿಕೆಯನ್ನು ತಡೆಗಟ್ಟಲು ಕೈ ತೊಳೆಯುವುದು ಅತ್ಯಂತ ಪರಿಣಾಮಕಾರಿ’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೆ.ಜಯಲಕ್ಷ್ಮಿ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಸಮುದಾಯ ಮತ್ತು ಮಕ್ಕಳಲ್ಲಿ ಕೈ ನೈರ್ಮಲ್ಯದ ಮಹತ್ವದ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಅತ್ಯವಶ್ಯವಿದೆ’ ಎಂದು ತಿಳಿಸಿದರು.</p>.<p>‘ಶುದ್ಧ ಕುಡಿಯುವ ನೀರು, ನಿರ್ಮಲ ಪರಿಸರ ಹಾಗೂ ಉತ್ತಮ ಸ್ವಚ್ಛತೆಯ ಅಭ್ಯಾಸಗಳು ಜನ ಜೀವನ ಸುಧಾರಣೆಯ ಪ್ರಮುಖ ಅಂಶಗಳಾಗಿವೆ. ಊಟಕ್ಕೆ ಮೊದಲು, ಶೌಚಕ್ಕೆ ಹೋದ ನಂತರ ಸೋಪಿನಿಂದ ಕೈ ತೊಳೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಪ್ರಮೀಳಾ, ಬಿ.ಸಿ.ನಾಗರಾಜ್, ಶಶಿಧರ್, ವಿನಯ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ರೋಗ ತಡೆಗಟ್ಟುವಿಕೆ, ಹರಡುವಿಕೆಯನ್ನು ತಡೆಗಟ್ಟಲು ಕೈ ತೊಳೆಯುವುದು ಅತ್ಯಂತ ಪರಿಣಾಮಕಾರಿ’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೆ.ಜಯಲಕ್ಷ್ಮಿ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಸಮುದಾಯ ಮತ್ತು ಮಕ್ಕಳಲ್ಲಿ ಕೈ ನೈರ್ಮಲ್ಯದ ಮಹತ್ವದ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಅತ್ಯವಶ್ಯವಿದೆ’ ಎಂದು ತಿಳಿಸಿದರು.</p>.<p>‘ಶುದ್ಧ ಕುಡಿಯುವ ನೀರು, ನಿರ್ಮಲ ಪರಿಸರ ಹಾಗೂ ಉತ್ತಮ ಸ್ವಚ್ಛತೆಯ ಅಭ್ಯಾಸಗಳು ಜನ ಜೀವನ ಸುಧಾರಣೆಯ ಪ್ರಮುಖ ಅಂಶಗಳಾಗಿವೆ. ಊಟಕ್ಕೆ ಮೊದಲು, ಶೌಚಕ್ಕೆ ಹೋದ ನಂತರ ಸೋಪಿನಿಂದ ಕೈ ತೊಳೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಪ್ರಮೀಳಾ, ಬಿ.ಸಿ.ನಾಗರಾಜ್, ಶಶಿಧರ್, ವಿನಯ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>