<p><strong>ಹೊಸದುರ್ಗ</strong>: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದ ಎದುರಿರುವ ನೀರು ಶುದ್ಧೀಕರಣ ಘಟಕದಲ್ಲಿ ಸೋಮವಾರ ಕ್ಲೋರಿನ್ ಸೋರಿಕೆಯಾಗಿ 30 ಜನರು ಅಸ್ವಸ್ಥಗೊಂಡಿದ್ದಾರೆ.</p>.<p>ಸಂಜೆ 6ರ ಸುಮಾರಿಗೆ ಘಟಕದಲ್ಲಿ ಇದ್ದಕ್ಕಿದ್ದಂತೆ ಕ್ಲೋರಿನ್ ಸೋರಿಕೆಯಾಗಿದೆ. ಅಕ್ಕಪಕ್ಕದ ಬಡಾವಣೆಯ ನಿವಾಸಿಗಳು ಅಸ್ವಸ್ಥರಾಗಿದ್ದು, ಅವರೆಲ್ಲರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾತ್ರಿ 8 ರ ಹೊತ್ತಿಗೆ ಸೋರಿಕೆ ತಡೆಯಲಾಗಿದೆ.</p>.<p>ಇಲ್ಲಿನ ಕಲ್ಲೇಶ್ವರ ಬಡಾವಣೆ, ಅಯ್ಯಪ್ಪಸ್ವಾಮಿ ಬಡಾವಣೆ, ಗೊರವಿನಕಲ್ಲು, ಕಪ್ಪಗೆರೆ ರಸ್ತೆ ಬಳಿಯ ನಿವಾಸಿಗಳು ಅಸ್ವಸ್ಥರಾಗಿದ್ದಾರೆ. ಕೆಲವರಿಗೆ ವಾಂತಿಯಾಗಿದೆ. ಇನ್ನು ಕೆಲವರಲ್ಲಿ ತಲೆ ಸುತ್ತು, ಕೆಮ್ಮು, ಉಸಿರಾಟದ ಸಮಸ್ಯೆ ಕಂಡುಬಂದಿದೆ. ಅಂಥವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆಯೇ ಘಟಕದ ಬಳಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ವೃತ್ತ ನಿರೀಕ್ಷಕ, ಅಗ್ನಿಶಾಮಕ ದಳದವರು ಪರಿಸ್ಥಿತಿ ನಿಭಾಯಿಸಲು ಹೆಣಗಾಡಬೇಕಾಯಿತು. ಸುತ್ತಲಿನ ಪ್ರದೇಶದ ಜನರಿಗೂ ಎಚ್ಚರಿಕೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>‘ನೀರು ಶುದ್ಧೀಕರಣ ಘಟಕದಿಂದ ಈ ಮೊದಲು ಹೊಸದುರ್ಗಕ್ಕೆ ನೀರು ಪೂರೈಸಲಾಗುತ್ತಿತ್ತು. ಕೆಲ್ಲೋಡು ಬಳಿ ಹೊಸದಾಗಿ ಪಂಪ್ಹೌಸ್ ನಿರ್ಮಿಸಿದ ನಂತರ 8 ವರ್ಷಗಳಿಂದ ಇದರ ಬಳಕೆ ನಿಂತಿದೆ. ಆಕಸ್ಮಿಕವಾಗಿ ಕ್ಲೋರಿನ್ ಸೋರಿಕೆಯಾಗಿದೆ. 1 ಕಿ.ಮೀ.ವರೆಗೂ ಗಾಳಿಯಲ್ಲಿ ಹರಡಿದ್ದು, ತಜ್ಞರ ತಂಡದೊಂದಿಗೆ ಸ್ಥಳಕ್ಕೆ ತೆರಳಿ ನೀರಿನಲ್ಲಿ ಕ್ಲೋರಿನ್ ವಿಲೀನಗೊಳಿಸಲಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದ ಎದುರಿರುವ ನೀರು ಶುದ್ಧೀಕರಣ ಘಟಕದಲ್ಲಿ ಸೋಮವಾರ ಕ್ಲೋರಿನ್ ಸೋರಿಕೆಯಾಗಿ 30 ಜನರು ಅಸ್ವಸ್ಥಗೊಂಡಿದ್ದಾರೆ.</p>.<p>ಸಂಜೆ 6ರ ಸುಮಾರಿಗೆ ಘಟಕದಲ್ಲಿ ಇದ್ದಕ್ಕಿದ್ದಂತೆ ಕ್ಲೋರಿನ್ ಸೋರಿಕೆಯಾಗಿದೆ. ಅಕ್ಕಪಕ್ಕದ ಬಡಾವಣೆಯ ನಿವಾಸಿಗಳು ಅಸ್ವಸ್ಥರಾಗಿದ್ದು, ಅವರೆಲ್ಲರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾತ್ರಿ 8 ರ ಹೊತ್ತಿಗೆ ಸೋರಿಕೆ ತಡೆಯಲಾಗಿದೆ.</p>.<p>ಇಲ್ಲಿನ ಕಲ್ಲೇಶ್ವರ ಬಡಾವಣೆ, ಅಯ್ಯಪ್ಪಸ್ವಾಮಿ ಬಡಾವಣೆ, ಗೊರವಿನಕಲ್ಲು, ಕಪ್ಪಗೆರೆ ರಸ್ತೆ ಬಳಿಯ ನಿವಾಸಿಗಳು ಅಸ್ವಸ್ಥರಾಗಿದ್ದಾರೆ. ಕೆಲವರಿಗೆ ವಾಂತಿಯಾಗಿದೆ. ಇನ್ನು ಕೆಲವರಲ್ಲಿ ತಲೆ ಸುತ್ತು, ಕೆಮ್ಮು, ಉಸಿರಾಟದ ಸಮಸ್ಯೆ ಕಂಡುಬಂದಿದೆ. ಅಂಥವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆಯೇ ಘಟಕದ ಬಳಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ವೃತ್ತ ನಿರೀಕ್ಷಕ, ಅಗ್ನಿಶಾಮಕ ದಳದವರು ಪರಿಸ್ಥಿತಿ ನಿಭಾಯಿಸಲು ಹೆಣಗಾಡಬೇಕಾಯಿತು. ಸುತ್ತಲಿನ ಪ್ರದೇಶದ ಜನರಿಗೂ ಎಚ್ಚರಿಕೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>‘ನೀರು ಶುದ್ಧೀಕರಣ ಘಟಕದಿಂದ ಈ ಮೊದಲು ಹೊಸದುರ್ಗಕ್ಕೆ ನೀರು ಪೂರೈಸಲಾಗುತ್ತಿತ್ತು. ಕೆಲ್ಲೋಡು ಬಳಿ ಹೊಸದಾಗಿ ಪಂಪ್ಹೌಸ್ ನಿರ್ಮಿಸಿದ ನಂತರ 8 ವರ್ಷಗಳಿಂದ ಇದರ ಬಳಕೆ ನಿಂತಿದೆ. ಆಕಸ್ಮಿಕವಾಗಿ ಕ್ಲೋರಿನ್ ಸೋರಿಕೆಯಾಗಿದೆ. 1 ಕಿ.ಮೀ.ವರೆಗೂ ಗಾಳಿಯಲ್ಲಿ ಹರಡಿದ್ದು, ತಜ್ಞರ ತಂಡದೊಂದಿಗೆ ಸ್ಥಳಕ್ಕೆ ತೆರಳಿ ನೀರಿನಲ್ಲಿ ಕ್ಲೋರಿನ್ ವಿಲೀನಗೊಳಿಸಲಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>