ಚರಂಡಿಗಳಲ್ಲಿ ಕೊಳಚೆ ತುಂಬುವುದರಿಂದ ಸೊಳ್ಳೆಗಳು ಉತ್ಪತ್ತಿ ಜಾಸ್ತಿ ಆಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ನಡೆಸಲಾಗಿದ್ದು ಲಾರ್ವಾ ನಿರೋಧಕ ರಾಸಾಯನಿಕ ಸಿಂಪಡಣೆ ಕಾರ್ಯ ಮಾಡಲಾಗಿದೆ. ಜನರು ಶುದ್ಧ ಕುಡಿಯುವ ನೀರು ಸೇವಿಸಬೇಕುಡಾ.ಟಿ.ಡಿ.ರೇಖಾ ತಾಲ್ಲೂಕು ಆರೋಗ್ಯಾಧಿಕಾರಿ
ಚೀರನಹಳ್ಳಿ ಕಂಬದ ದೇವರಹಟ್ಟಿಯ ಮಾರ್ಗದಲ್ಲಿ ಜನರು ನಿತ್ಯ ಹೆಚ್ಚಾಗಿ ಸಂಚರಿಸುತ್ತಾರೆ. ಆದರೆ ಚರಂಡಿಯ ತುಂಬ ಕಸ ತುಂಬಿಕೊಂಡಿರುವ ಕಾರಣ ದುರ್ವಾಸನೆಯಿಂದ ಓಡಾಡುವುದೇ ಕಷ್ಟವಾಗಿದೆ.ಡಿ.ಇ.ರವಿಕುಮಾರ್ ಸ್ಥಳೀಯ ನಿವಾಸಿ
ಖಂಡೇನಹಳ್ಳಿ ಗ್ರಾಮದಲ್ಲಿ ಕೆಲವು ಕಡೆ ಚರಂಡಿ ಇಲ್ಲ. ಇರುವ ಕಡೆ ಸರಿಯಾದ ನಿರ್ವಹಣೆ ಇಲ್ಲ. ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಿದೆ. ತಕ್ಷಣವೇ ಗ್ರಾಮ ಪಂಚಾಯಿತಿಯವರು ಸ್ವಚ್ಛತೆ ಕಾರ್ಯಕ್ಕೆ ಮುಂದಾಗಬೇಕುನರಸಿಂಹಮೂರ್ತಿ ಖಂಡೇನಹಳ್ಳಿ ನಿವಾಸಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಸಿಸಿ ರಸ್ತೆ ಮಾಡಿರುವ ಕಾರಣ ಜಾಗ ಕಿರಿದಾಗಿದೆ. ಬಾಕ್ಸ್ ಚರಂಡಿ ನಿರ್ಮಿಸಲು ಜಾಗದ ಕೊರತೆ ಎದುರಾಗಿದೆ. ಶೀಘ್ರ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸಲಾಗುತ್ತದೆಬಾಲ ಸುಬ್ರಮಣಿ ಪಿಡಿಒ ಖಂಡೇನಹಳ್ಳಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.