ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರ ಜೀವನ ದುಸ್ತರಗೊಳಿಸುತ್ತಿವೆ. ಈಗಲಾದರೂ ಎಚ್ಚೆತ್ತುಕೊಂಡು ವಿದ್ಯುತ್ ದರ ಏರಿಕೆ ತೀರ್ಮಾನ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಅಜ್ಜಪ್ಪ, ಬಿ.ಟಿ.ಜಗದೀಶ್, ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್, ಓ.ಶಂಕರ್, ಎನ್.ಡಿ.ಕುಮಾರ್, ಎಚ್.ಅಂಜಿನಪ್ಪ, ಅಶ್ರಫ್, ಪಿ.ಕೆ.ಮೀನಾಕ್ಷಿ, ಮೋಕ್ಷಾ ರುದ್ರಸ್ವಾಮಿ ಇದ್ದರು.