ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

Last Updated 2 ಏಪ್ರಿಲ್ 2023, 5:50 IST
ಅಕ್ಷರ ಗಾತ್ರ

ಹೊಳಲ್ಕೆರೆ: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಗಂಗಯ್ಯನ ಪಾಳ್ಯ ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ರೈತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

‘ಹಲ್ಲೆ ಅಮಾನವೀಯ ಕೃತ್ಯ. ಅರಣ್ಯ ಇಲಾಖೆಯ ಸಿಬ್ಬಂದಿ ಮಹಿಳೆಯರು, ಮಕ್ಕಳೆನ್ನದೆ ದೊಣ್ಣೆಗಳಿಂದ ಹೊಡೆದಿದ್ದಾರೆ. ಪ್ರಕರಣ ದಾಖಲಿಸಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಆಗ್ರಹಿಸಿದರು.

ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಬಿಡಿಎ ಬಡಾವಣೆ ನಿರ್ಮಿಸಲು ರೈತರ ಜಮೀನನ್ನು ಬಲವಂತವಾಗಿ ಪಡೆಯುತ್ತಿದೆ. ಇದು ಖಂಡನೀಯ ಎಂದರು. ಮುಖಂಡರಾದ ದಿವ್ಯಜ್ಯೋತಿ, ವಿಜಯ, ಶಾಂತಮೂರ್ತಿ, ಎಸ್.ಎಂ. ಶಿವಕುಮಾರ್, ಜಯಪ್ಪ, ಸಿ.ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT