ನಂತರ ಮಾತನಾಡಿದ ಪಿ.ರಘು, ‘ಕಾಂಗ್ರೆಸ್ ಪಕ್ಷ ಬಡವರು, ದೀನ, ತಲಿತರು, ಶೋಷಿತರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದು, ಆರ್ಥಿಕವಾಗಿ ಪ್ರಬಲರಾಗುತ್ತಿದ್ದಾರೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಗ್ಯಾರಂಟಿ ಯೋಜನೆಗಳು ಜಾರಿಯಾಗಲಿದ್ದು, ದೇಶದ ಜನ ನೆಮ್ಮದಿಯಿಂದ ಬದುಕುತ್ತಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.