<p><strong>ಹಿರೇಗುಂಟನೂರು (ಚಿತ್ರದುರ್ಗ): </strong>ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸೋಲಿನ ಭೀತಿ ಬಿಜೆಪಿಗೆ ಕಾಡುತ್ತಿದೆ. ಹೀಗಾಗಿ ಚುನಾವಣೆ ಮುಂದೂಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ದೂರಿದರು.</p>.<p>ತಾಲ್ಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದಭಾನುವಾರ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮೋತ್ಸವ, ಮಹಾತ್ಮಗಾಂಧಿ ಗ್ರಾಮ ಸ್ವರಾಜ್ಯ ಹಾಗೂ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ ಆಯ್ಕೆ ಸಭೆಯಲ್ಲಿ ಮಾತನಾಡಿದರು.</p>.<p>‘ರಾಜ್ಯದಲ್ಲಿ ಶೇ 70ರಷ್ಟು ಕಾಂಗ್ರೆಸ್ ಬೆಂಬಲಿತರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಹೀಗಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ಗೆ ಕಷ್ಟದ ಕೆಲಸವಲ್ಲ. ಆದರೂ ಕಾರ್ಯಕರ್ತರು ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈಗಿನಿಂದಲೇ ಗೆಲುವಿಗಾಗಿ ಶ್ರಮಿಸಬೇಕಿದೆ’ ಎಂದರು.</p>.<p>‘ಕಾಂಗ್ರೆಸ್ ಈ ಹಿಂದೆ ರೈತರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿದ್ದ ಸುಮಾರು ₹ 75 ಸಾವಿರ ಕೋಟಿ ಸಾಲ ಮನ್ನ ಮಾಡಿದೆ. ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಪಕ್ಷ ಬೆಂಬಲಿಸುತ್ತಿದೆ. ಆದರೆ, ಪ್ರಧಾನಿ ನರೇಂದ್ರಮೋದಿ ಗಮನಹರಿಸದೆ, ರೈತ ವಿರೋಧಿ ಆಡಳಿತ ನಡೆಸುತ್ತಿದ್ದಾರೆ’ ಎಂದು ದೂರಿದರು.</p>.<p class="Subhead">ಆಂಜನೇಯ–ಮಂಜುನಾಥ್ ವಾಗ್ವಾದ</p>.<p>ಭೀಮಸಮುದ್ರದ ಜಿ.ಎಸ್.ಮಂಜುನಾಥ್ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರು ವೇದಿಕೆಯಲ್ಲಿಯೇ ವಾಗ್ವಾದ ನಡೆಸಿದರು. ಇದರಿಂದ ಸಭೆಯಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>ಆಂಜನೇಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಜಿ.ಎಸ್.ಮಂಜುನಾಥ್ ಅಸಮಾಧಾನ ಹೊರಹಾಕಿದರು. ಪೋಡಿಯಂ ಬಳಿಗೆ ಬರುತ್ತಿದ್ದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಪ್ರಯತ್ನಿಸಿದರು.</p>.<p>2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಮಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಜಿ.ಎಸ್.ಮಂಜುನಾಥ್ ಕಿಡಿಕಾರಿದರು. ಇಬ್ಬರು ನಾಯಕರ ಬೆಂಬಲಿಗರು ವೇದಿಕೆಗೆ ಧಾವಿಸಿದಾಗ ಗೊಂದಲ ಸೃಷ್ಟಿಯಾಯಿತು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಮಾಜಿ ಶಾಸಕ ಎ.ವಿ.ಉಮಾಪತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಮುಖಂಡರಾದ ಹನುಮಲಿ ಷಣ್ಮುಖ, ಜಿ.ಎಸ್.ಮಂಜುನಾಥ್, ಓ.ಶಂಕರ್, ಗೀತಾನಂದಿನಿಗೌಡ, ಲಕ್ಷ್ಮೀಕಾಂತ್, ಪ್ರಕಾಶ್, ನರಸಿಂಹರಾಜು, ಶಶಿಕಲಾ, ಡಿ.ಎನ್.ಮೈಲಾರಪ್ಪ, ರಾಜ್ಕುಮಾರ್ ಇದ್ದರು.</p>.<p>***</p>.<p>ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಜನರ ಹಿತ ಕಾಯದೇ ಭ್ರಷ್ಟಾಚಾರದಲ್ಲಿಯೇ ಮುಳುಗಿದೆ. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಪಕ್ಷವನ್ನು ಪುನಾ ಅಧಿಕಾರಕ್ಕೆ ತಂದು ಜನರ ಕಲ್ಯಾಣ ಮಾಡಲು ಮುಂದಾಗಬೇಕಿದೆ.</p>.<p>ಬಿ.ಎನ್.ಚಂದ್ರಪ್ಪ, ಮಾಜಿ ಸಂಸದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಗುಂಟನೂರು (ಚಿತ್ರದುರ್ಗ): </strong>ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸೋಲಿನ ಭೀತಿ ಬಿಜೆಪಿಗೆ ಕಾಡುತ್ತಿದೆ. ಹೀಗಾಗಿ ಚುನಾವಣೆ ಮುಂದೂಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ದೂರಿದರು.</p>.<p>ತಾಲ್ಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದಭಾನುವಾರ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮೋತ್ಸವ, ಮಹಾತ್ಮಗಾಂಧಿ ಗ್ರಾಮ ಸ್ವರಾಜ್ಯ ಹಾಗೂ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ ಆಯ್ಕೆ ಸಭೆಯಲ್ಲಿ ಮಾತನಾಡಿದರು.</p>.<p>‘ರಾಜ್ಯದಲ್ಲಿ ಶೇ 70ರಷ್ಟು ಕಾಂಗ್ರೆಸ್ ಬೆಂಬಲಿತರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಹೀಗಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ಗೆ ಕಷ್ಟದ ಕೆಲಸವಲ್ಲ. ಆದರೂ ಕಾರ್ಯಕರ್ತರು ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈಗಿನಿಂದಲೇ ಗೆಲುವಿಗಾಗಿ ಶ್ರಮಿಸಬೇಕಿದೆ’ ಎಂದರು.</p>.<p>‘ಕಾಂಗ್ರೆಸ್ ಈ ಹಿಂದೆ ರೈತರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿದ್ದ ಸುಮಾರು ₹ 75 ಸಾವಿರ ಕೋಟಿ ಸಾಲ ಮನ್ನ ಮಾಡಿದೆ. ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಪಕ್ಷ ಬೆಂಬಲಿಸುತ್ತಿದೆ. ಆದರೆ, ಪ್ರಧಾನಿ ನರೇಂದ್ರಮೋದಿ ಗಮನಹರಿಸದೆ, ರೈತ ವಿರೋಧಿ ಆಡಳಿತ ನಡೆಸುತ್ತಿದ್ದಾರೆ’ ಎಂದು ದೂರಿದರು.</p>.<p class="Subhead">ಆಂಜನೇಯ–ಮಂಜುನಾಥ್ ವಾಗ್ವಾದ</p>.<p>ಭೀಮಸಮುದ್ರದ ಜಿ.ಎಸ್.ಮಂಜುನಾಥ್ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರು ವೇದಿಕೆಯಲ್ಲಿಯೇ ವಾಗ್ವಾದ ನಡೆಸಿದರು. ಇದರಿಂದ ಸಭೆಯಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>ಆಂಜನೇಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಜಿ.ಎಸ್.ಮಂಜುನಾಥ್ ಅಸಮಾಧಾನ ಹೊರಹಾಕಿದರು. ಪೋಡಿಯಂ ಬಳಿಗೆ ಬರುತ್ತಿದ್ದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಪ್ರಯತ್ನಿಸಿದರು.</p>.<p>2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಮಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಜಿ.ಎಸ್.ಮಂಜುನಾಥ್ ಕಿಡಿಕಾರಿದರು. ಇಬ್ಬರು ನಾಯಕರ ಬೆಂಬಲಿಗರು ವೇದಿಕೆಗೆ ಧಾವಿಸಿದಾಗ ಗೊಂದಲ ಸೃಷ್ಟಿಯಾಯಿತು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಮಾಜಿ ಶಾಸಕ ಎ.ವಿ.ಉಮಾಪತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಮುಖಂಡರಾದ ಹನುಮಲಿ ಷಣ್ಮುಖ, ಜಿ.ಎಸ್.ಮಂಜುನಾಥ್, ಓ.ಶಂಕರ್, ಗೀತಾನಂದಿನಿಗೌಡ, ಲಕ್ಷ್ಮೀಕಾಂತ್, ಪ್ರಕಾಶ್, ನರಸಿಂಹರಾಜು, ಶಶಿಕಲಾ, ಡಿ.ಎನ್.ಮೈಲಾರಪ್ಪ, ರಾಜ್ಕುಮಾರ್ ಇದ್ದರು.</p>.<p>***</p>.<p>ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಜನರ ಹಿತ ಕಾಯದೇ ಭ್ರಷ್ಟಾಚಾರದಲ್ಲಿಯೇ ಮುಳುಗಿದೆ. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಪಕ್ಷವನ್ನು ಪುನಾ ಅಧಿಕಾರಕ್ಕೆ ತಂದು ಜನರ ಕಲ್ಯಾಣ ಮಾಡಲು ಮುಂದಾಗಬೇಕಿದೆ.</p>.<p>ಬಿ.ಎನ್.ಚಂದ್ರಪ್ಪ, ಮಾಜಿ ಸಂಸದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>