‘ಇದೀಗ ಕಾಲ ಕೂಡಿ ಬಂದಿದ್ದು, ನಾನು ಬೆಳೆದ ಮನೆಗೆ ಹಿಂತಿರುಗುತ್ತಿದ್ದೇನೆ. ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಇಂದು ಸ್ವೀಕೃತವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಇನ್ನೆರಡು ದಿನಗಳಲ್ಲಿ ಕರೆ ಮಾಡುವ ಸಾಧ್ಯತೆಯಿದ್ದು, ಕೂಡಲೇ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಎರಡನೇ ಪಟ್ಟಿಯಲ್ಲಿ ಸಂಭ್ಯಾವ್ಯ ಅಭ್ಯರ್ಥಿಯಾಗಿ ನನ್ನ ಹೆಸರು ಬರುವ ಸಾಧ್ಯತೆ ಇದೆ. ಅವಕಾಶ ನೀಡಿದರೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.