ಎಲ್ಲಾ ಸಮುದಾಯದ ಬಡವರಿಗೆ ವಸತಿ, ಪಡಿತರ, ನರೇಗಾ ಯೋಜನೆ ಮೂಲಕ ಕೂಲಿ ಕೆಲಸ, ಭೂರಹಿತರಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್. ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ ಮಾಡಿದ್ದು ಹೊರತುಪಡಿಸಿ ಬೇರೆ ಯಾವುದೇ ಸಾಧನೆ ಆಗಿಲ್ಲ. ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆ ಆಗಿದ್ದರಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಮೋದಿಯವರು ಹಿಂದಕ್ಕೆ ಪಡೆದರು. ಡೀಸೆಲ್, ಪೆಟ್ರೋಲ್ ಬೆಲೆ ಇಳಿಸುವ ನಾಟಕ ಆಡಿದರು. ಈಗ ನಿತ್ಯ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರುತ್ತಿದೆ ಎಂದು ವಾಗ್ದಾಳಿ ನಡೆಸಿದರು.