ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಉಪಾಧ್ಯಕ್ಷ ಕೆ.ಎಚ್. ಮುನಿಯಪ್ಪ, ಡಾ.ಎಚ್.ಸಿ. ಮಹದೇವಪ್ಪ, ಎಚ್. ಆಂಜನೇಯ, ಬಿ.ಎನ್. ಚಂದ್ರಪ್ಪ, ಟಿ.ಪಿ.ಪರಮೇಶ್ವರ ನಾಯ್ಕ ಸೇರಿ ಅನೇಕರು ರಾಜ್ಯ ಸಂಚರಿಸಿ ಸಮಾವೇಶಕ್ಕೆ ಕಾರ್ಯಕರ್ತರನ್ನು ಕರೆತರಲು ಪ್ರಯತ್ನಿಸಿದ್ದಾರೆ.