‘ಪಟ್ಟಣದ ಸಂಗಮನಗರದಲ್ಲಿ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಕೆಲವು ಮುಖಂಡರು ಕೂಲಿಕಾರ್ಮಿಕರನ್ನು ಪ್ರಶ್ನೆ ಮಾಡಿದ್ದಾರೆ. ಅವರು ಎಂಜಿನಿಯರ್ ಅಥವಾ ಗುತ್ತಿಗೆದಾರರನ್ನು ಕೇಳಬೇಕಿತ್ತು. ಅದನ್ನು ಹೊರತುಪಡಿಸಿ, ಕೂಲಿ ಕಾರ್ಮಿಕರಿಗೆ ದೌರ್ಜನ್ಯ ವೆಸಗಿದ್ದಾರೆ. ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿ, ಅವರ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ? ಅಪರಾಧ ಎಸಗಿದವರನ್ನು ಪೊಲೀಸ್ ಠಾಣೆಯಿಂದ ಬಿಡಿಸಲು ಬರುತ್ತಾರೆ. ಒಪ್ಪದಿದ್ದರೆ ಸುಮ್ಮನೆ ಆರೋಪ ಮಾಡುತ್ತಾರೆ’ ಎಂದು ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.