<p><strong>ಹೊಳಲ್ಕೆರೆ</strong>: ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಅರಿತು ಅದರ ಆಶಯದಂತೆ ಬದುಕಬೇಕು ಎಂದು ವಕೀಲ ಎಚ್. ಮೊಹಮದ್ ಇಮ್ರಾನ್ ತಿಳಿಸಿದರು.</p>.<p>ಪಟ್ಟಣದ ಎನ್ಇಎಸ್ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಆಶಯವಾಗಿದ್ದು, ಅದರ ಪರಿಪಾಲನೆ ಮಾಡಬೇಕು. ಕಾನೂನುಗಳನ್ನು ತಿಳಿಯುವುದು ಅಗತ್ಯವಾಗಿದ್ದು, ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯ ಪಡೆಯಲು ಎಲ್ಲರಿಗೂ ಅವಕಾಶ ಇದೆ. ವಿದ್ಯಾರ್ಥಿಗಳು ದೊಡ್ಡ ಗುರಿಯೊಂದಿಗೆ ಅಧ್ಯಯನ ಮಾಡಿದರೆ ಯಶಸ್ಸು ಸಿಗಲಿದೆ’ ಎಂದರು.</p>.<p>ಎಂಎಂ ಶಾಲೆಯ ಶಿಕ್ಷಕ ಮಾಲತೇಶ್, ಮಾರುತಿ, ಎನ್ಇಎಸ್ ಶಾಲೆಯ ಮುಖ್ಯಶಿಕ್ಷಕ ಜಿ. ಪ್ರಕಾಶ್, ಎನ್. ಕಾಂತರಾಜ್, ಜಿ.ಎಸ್. ಗಿರೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಅರಿತು ಅದರ ಆಶಯದಂತೆ ಬದುಕಬೇಕು ಎಂದು ವಕೀಲ ಎಚ್. ಮೊಹಮದ್ ಇಮ್ರಾನ್ ತಿಳಿಸಿದರು.</p>.<p>ಪಟ್ಟಣದ ಎನ್ಇಎಸ್ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಆಶಯವಾಗಿದ್ದು, ಅದರ ಪರಿಪಾಲನೆ ಮಾಡಬೇಕು. ಕಾನೂನುಗಳನ್ನು ತಿಳಿಯುವುದು ಅಗತ್ಯವಾಗಿದ್ದು, ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯ ಪಡೆಯಲು ಎಲ್ಲರಿಗೂ ಅವಕಾಶ ಇದೆ. ವಿದ್ಯಾರ್ಥಿಗಳು ದೊಡ್ಡ ಗುರಿಯೊಂದಿಗೆ ಅಧ್ಯಯನ ಮಾಡಿದರೆ ಯಶಸ್ಸು ಸಿಗಲಿದೆ’ ಎಂದರು.</p>.<p>ಎಂಎಂ ಶಾಲೆಯ ಶಿಕ್ಷಕ ಮಾಲತೇಶ್, ಮಾರುತಿ, ಎನ್ಇಎಸ್ ಶಾಲೆಯ ಮುಖ್ಯಶಿಕ್ಷಕ ಜಿ. ಪ್ರಕಾಶ್, ಎನ್. ಕಾಂತರಾಜ್, ಜಿ.ಎಸ್. ಗಿರೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>