ವಿದ್ಯಾನಗರ, ಬಸವೇಶ್ವರ ನಗರ ಸೇರಿ ನಗರದ ಯಾವುದೇ ಮೂಲೆಗಳಿಂದಲೂ ಕೆರೆಗೆ ಚರಂಡಿ ನೀರು ಹರಿಯದಂತೆ ನಗರಸಭೆ, ಗ್ರಾಮ ಪಂಚಾಯಿತಿ ಕೂಡಲೇ ಕ್ರಮ ಕೈಗೊಳ್ಳಬೇಕು. ಹೂಳು ತೆಗೆಸುವ ಮೂಲಕ ಸಂಪೂರ್ಣ ಸ್ವಚ್ಛಗೊಳಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಮಹಾತ್ಮಗಾಂಧಿ ಕೆರೆ ಬಳಕೆದಾರರ ಸಂಘದ ಸಿದ್ಧಪ್ಪ, ಎಂ. ಬಸವರಾಜು, ಗುರುಲಿಂಗಪ್ಪ ಮನವಿ ಮಾಡಿದ್ದಾರೆ.