ಅಧಿಕಾರಿಗಳ ಒಂದು ತಂಡ ರವೀಂದ್ರಪ್ಪ ಅವರ ಮಗ ಡಾ.ಸತ್ಯನಾರಾಯಣ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದು, ಅಲ್ಲಿನ ನಿವಾಸದಲ್ಲೂ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ರವೀಂದ್ರಪ್ಪ 2021ರಲ್ಲಿ ನಿವೃತ್ತರಾಗಿ ಮುಂಗುಸುವಳ್ಳಿ ತೋಟದ ಮನೆಯಲ್ಲಿ ವಾಸವಿದ್ದರು. ಈಗ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿರುವುದು ಜೆಡಿಎಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದ್ದು, ಕಾರ್ಯಕರ್ತರು ಶನಿವಾರ ಅವರ ನಿವಾಸದ ಮುಂದೆ ಜಮಾಯಿಸಿದ್ದರು.
ರವೀಂದ್ರಪ್ಪ ಪ್ರಚಾರ ಕೈಗೊಳ್ಳಲು ಅಧಿಕಾರಿಗಳು ಅವಕಾಶ ನೀಡಿದರು.
‘ಅಧಿಕಾರಿಗಳ ಶೋಧ ಮುಂದುವರಿದಿದೆ. ಇದರ ಬಗ್ಗೆ ಸಂಪೂರ್ಣ ಪರಿಶೀಲನೆ ಮುಗಿಯುವವರೆಗೂ ಏನೂ ಹೇಳುವಂತಿಲ್ಲ ಎಂದು ತೆರಿಗೆ ಅಧಿಕಾರಿಗಳು ತಾಕೀತು ಮಾಡಿದ್ದಾರೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ. ಎಲ್ಲಿಯೂ ಸಮಸ್ಯೆಯಾಗಿಲ್ಲ. ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ’ ಎಂದು ರವೀಂದ್ರಪ್ಪ ತಿಳಿಸಿದರು.
ಶನಿವಾರ ಚಿಲ್ಲಹಳ್ಳಿ, ಗೂಳ್ಯ, ಸೂಗೂರು, ಸಾಲುಣಿಸೆ, ಕಂಭತ್ತನಹಳ್ಳಿ ಸೇರಿ ಹಲವೆಡೆ ಅವರು ಪ್ರಚಾರ ನಡೆಸಿದರು.