<p><strong>ಚಿತ್ರದುರ್ಗ:</strong> ‘ನಿತ್ಯದ ಜೀವನ ಕ್ರಮದಲ್ಲಿ ಒಂದು ಗಂಟೆಯಾದರೂ ದೇಹದ ಆರೋಗ್ಯದ ಕಡೆಗೆ ಗಮನಹರಿಸಬೇಕು. ಜತೆಗೆ ನಿರಂತರ ಯೋಗ ಬದ್ಧತೆಯಿಂದ ಕೂಡಿರಬೇಕು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಗುರುವಾರ ರಾಷ್ಟ್ರೀಯ ಯೋಗ ಶಿಕ್ಷಣ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಉಚಿತ ಯೋಗ ಪ್ರಾಣಾಯಾಮ ನಿರಂತರ ತರಗತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಒಮ್ಮೊಮ್ಮೆ ಜೀವನದಲ್ಲಿ ಯಾವುದನ್ನು ಅಮುಖ್ಯ ಎಂದು ಪರಿಗಣಿಸುತ್ತೇವೆಯೋ ಅದು ಮುಖ್ಯವಾಗುತ್ತದೆ. ಅದರಲ್ಲಿ ಆರೋಗ್ಯದ ಬಗೆಗಿನ ಕಾಳಜಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ’ ಎಂದರು.</p>.<p>‘ಇಂದಿನ ಪರಿಸ್ಥಿತಿ ಗಮನಿಸಿದರೆ ಕೆಲ ವರ್ಷದಲ್ಲಿ ಪ್ರಪಂಚ ಸಂಪೂರ್ಣ ಯೋಗದ ಕಡೆ ಮುಖ ಮಾಡುವುದು ಸ್ಪಷ್ಟವಾಗುತ್ತಿದೆ. ಆದ್ದರಿಂದ ಎಲ್ಲರೂ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ. ಆರೋಗ್ಯ ಸುಧಾರಿಸಿಕೊಳ್ಳುವ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು’ ಎಂದು ತಿಳಿಸಿದರು.</p>.<p>‘ಆರೋಗ್ಯ ಸುಧಾರಣೆ ಮೂಲಕ ಆರೋಗ್ಯವಂತ ಸಮಾಜಕ್ಕೆ ಸಹಕರಿಸಬೇಕು. ಆರೋಗ್ಯ ಕಡೆಗಣಿಸಿ ಹಣ, ಅಧಿಕಾರ ಮತ್ತು ಭೌತಿಕ ವಸ್ತುಗಳ ಕಡೆಗೆ ಗಮನಹರಿಸಿದರೆ ಯಾವುದೇ ಪ್ರಯೋಜನವಿಲ್ಲ. ನಿರ್ಲಕ್ಷ್ಯವಹಿಸಿ ತೀವ್ರ ತರಹದ ಕಾಯಿಲೆಗೆ ತುತ್ತಾದರೆ ಆಯುಷ್ಯ ಕಡಿಮೆಯಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಅಂತ ವಿಶ್ವಯೋಗ ಆರಂಭವಾಗಿ ಹತ್ತು ವರ್ಷ ಕಳೆದಿದೆ. ಯೋಗದ ಮಹತ್ವವನ್ನು ಪ್ರಪಂಚದ ನಾನಾ ದೇಶಗಳು ಬೆಂಬಲಿಸಿ ಅನುಷ್ಠಾನಕ್ಕೆ ತರಲು ಮುಂದಾಗಿವೆ’ ಎಂದು ಜಿಲ್ಲಾ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ತಿಳಿಸಿದರು.</p>.<p>‘ನೂರಾರು ಸಮಸ್ಯೆಗಳಿದ್ದರೆ ಅದಕ್ಕೆ ಪರಿಹಾರ ಕಂಡುಕೊಳ್ಳಬಹುದು. ಆದರೆ ದೇಹಕ್ಕೆ ಒಂದೇ ಒಂದು ಜಾಡ್ಯ ಬಂತೆಂದರೆ ಅದರ ಕಡೆಗೆ ನಮ್ಮ ಚಿಂತೆ ಇರುತ್ತದೆ. ದೇಹ ಗಟ್ಟಿಯಾಗಿದ್ದರೆ ಮಾತ್ರ ಏನಾದರೂ ಸಾಧನೆ ಸಾಧ್ಯ. ಅಂತಹ ಸದೃಢ ದೇಹ ಸಂಪಾದಿಸಲು ಯೋಗದಿಂದ ಸಾಧ್ಯವಿದೆ’ ಎಂದರು.</p>.<p>‘ಸರಿಯಾದ ಆಹಾರ, ನಿದ್ದೆ ಇತ್ಯಾದಿ ಉಪಕ್ರಮಗಳಿಂದ ಉತ್ತಮ ಆರೋಗ್ಯ ಸಂಪಾದಿಸಲು ಸಾಧ್ಯವಿದೆ. ಹಾಗೇ ಚಿಕಿತ್ಸೆ ದೊಡ್ಡದಲ್ಲ ಆರೋಗ್ಯ ದೊಡ್ಡದು. ಈ ಸರಳ ಸತ್ಯವನ್ನು ಅರ್ಥ ಮಾಡಿಕೊಂಡರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ’ ಎಂದು ತಿಳಿಸಿದರು.</p>.<p>‘ಆನಂದ ಯಾವುದೇ ಭೌತಿಕ ವಸ್ತುಗಳಲ್ಲಿಲ್ಲ. ಅದು ಆರೋಗ್ಯದಲ್ಲಿದೆ. ಅದನ್ನು ಸಂಪಾದಿಸಿದರೆ ಎಲ್ಲವನ್ನು ಸಂಪಾದಿಸಬಹುದು. ಬೇರೆಯವರ ಬಲವಂತಕ್ಕೆ ಯೋಗ ಮಾಡದೆ ವೈಯಕ್ತಿಕ ಹಿತಾಸಕ್ತಿಗೆ ಅಭ್ಯಾಸ ಮಾಡಬೇಕು’ ಎಂದು ಯೋಗಗುರು ಎಲ್.ಎಸ್.ಚಿನ್ಮಯಾನಂದ ಸಲಹೆ ನೀಡಿದರು.</p>.<p>‘ಯೋಗದಿಂದ ಮಾನಸಿಕ ಸದೃಢತೆ ಸಾಧ್ಯವಿದೆ. ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಚಿಕ್ಕ ಕಾರಣಕ್ಕೂ ಆತ್ಮಹತ್ಯೆ ಹಾದಿ ಹಿಡಿದಿರುವುದು ನೋವಿನ ಸಂಗತಿ. ಈ ಎಲ್ಲದಕ್ಕೂ ಯೋಗ ಮದ್ದಾಗಿದೆ’ ಎಂದು ಮುಖ್ಯ ಶಿಕ್ಷಕ ಕೆ.ಎನ್.ಮಹೇಶ್ ತಿಳಿಸಿದರು.<br> ‘ಆರೋಗ್ಯದಿಂದಲೇ ಎಲ್ಲವೂ ಸಾಧ್ಯವಿದೆ. ನಾವು ವಸ್ತುಗಳಿಗೆ ಆದ್ಯತೆ ನೀಡಿ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಮಾಡುತ್ತಿದ್ದೇವೆ. ನಮ್ಮ ಬದುಕು ಪರಿಸರಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಇದೇ ಅಸಮತೋಲನಕ್ಕೆ ಕಾರಣವಾಗಿ ಅನಾರೋಗ್ಯ ಹೆಚ್ಚಾಗಿದೆ’ ಎಂದರು.</p>.<p>ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಲ್.ಎಸ್.ಬಸವರಾಜ್, ಉಪನ್ಯಾಸಕ ಎಂ.ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ನಿತ್ಯದ ಜೀವನ ಕ್ರಮದಲ್ಲಿ ಒಂದು ಗಂಟೆಯಾದರೂ ದೇಹದ ಆರೋಗ್ಯದ ಕಡೆಗೆ ಗಮನಹರಿಸಬೇಕು. ಜತೆಗೆ ನಿರಂತರ ಯೋಗ ಬದ್ಧತೆಯಿಂದ ಕೂಡಿರಬೇಕು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಗುರುವಾರ ರಾಷ್ಟ್ರೀಯ ಯೋಗ ಶಿಕ್ಷಣ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಉಚಿತ ಯೋಗ ಪ್ರಾಣಾಯಾಮ ನಿರಂತರ ತರಗತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಒಮ್ಮೊಮ್ಮೆ ಜೀವನದಲ್ಲಿ ಯಾವುದನ್ನು ಅಮುಖ್ಯ ಎಂದು ಪರಿಗಣಿಸುತ್ತೇವೆಯೋ ಅದು ಮುಖ್ಯವಾಗುತ್ತದೆ. ಅದರಲ್ಲಿ ಆರೋಗ್ಯದ ಬಗೆಗಿನ ಕಾಳಜಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ’ ಎಂದರು.</p>.<p>‘ಇಂದಿನ ಪರಿಸ್ಥಿತಿ ಗಮನಿಸಿದರೆ ಕೆಲ ವರ್ಷದಲ್ಲಿ ಪ್ರಪಂಚ ಸಂಪೂರ್ಣ ಯೋಗದ ಕಡೆ ಮುಖ ಮಾಡುವುದು ಸ್ಪಷ್ಟವಾಗುತ್ತಿದೆ. ಆದ್ದರಿಂದ ಎಲ್ಲರೂ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ. ಆರೋಗ್ಯ ಸುಧಾರಿಸಿಕೊಳ್ಳುವ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು’ ಎಂದು ತಿಳಿಸಿದರು.</p>.<p>‘ಆರೋಗ್ಯ ಸುಧಾರಣೆ ಮೂಲಕ ಆರೋಗ್ಯವಂತ ಸಮಾಜಕ್ಕೆ ಸಹಕರಿಸಬೇಕು. ಆರೋಗ್ಯ ಕಡೆಗಣಿಸಿ ಹಣ, ಅಧಿಕಾರ ಮತ್ತು ಭೌತಿಕ ವಸ್ತುಗಳ ಕಡೆಗೆ ಗಮನಹರಿಸಿದರೆ ಯಾವುದೇ ಪ್ರಯೋಜನವಿಲ್ಲ. ನಿರ್ಲಕ್ಷ್ಯವಹಿಸಿ ತೀವ್ರ ತರಹದ ಕಾಯಿಲೆಗೆ ತುತ್ತಾದರೆ ಆಯುಷ್ಯ ಕಡಿಮೆಯಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಅಂತ ವಿಶ್ವಯೋಗ ಆರಂಭವಾಗಿ ಹತ್ತು ವರ್ಷ ಕಳೆದಿದೆ. ಯೋಗದ ಮಹತ್ವವನ್ನು ಪ್ರಪಂಚದ ನಾನಾ ದೇಶಗಳು ಬೆಂಬಲಿಸಿ ಅನುಷ್ಠಾನಕ್ಕೆ ತರಲು ಮುಂದಾಗಿವೆ’ ಎಂದು ಜಿಲ್ಲಾ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ತಿಳಿಸಿದರು.</p>.<p>‘ನೂರಾರು ಸಮಸ್ಯೆಗಳಿದ್ದರೆ ಅದಕ್ಕೆ ಪರಿಹಾರ ಕಂಡುಕೊಳ್ಳಬಹುದು. ಆದರೆ ದೇಹಕ್ಕೆ ಒಂದೇ ಒಂದು ಜಾಡ್ಯ ಬಂತೆಂದರೆ ಅದರ ಕಡೆಗೆ ನಮ್ಮ ಚಿಂತೆ ಇರುತ್ತದೆ. ದೇಹ ಗಟ್ಟಿಯಾಗಿದ್ದರೆ ಮಾತ್ರ ಏನಾದರೂ ಸಾಧನೆ ಸಾಧ್ಯ. ಅಂತಹ ಸದೃಢ ದೇಹ ಸಂಪಾದಿಸಲು ಯೋಗದಿಂದ ಸಾಧ್ಯವಿದೆ’ ಎಂದರು.</p>.<p>‘ಸರಿಯಾದ ಆಹಾರ, ನಿದ್ದೆ ಇತ್ಯಾದಿ ಉಪಕ್ರಮಗಳಿಂದ ಉತ್ತಮ ಆರೋಗ್ಯ ಸಂಪಾದಿಸಲು ಸಾಧ್ಯವಿದೆ. ಹಾಗೇ ಚಿಕಿತ್ಸೆ ದೊಡ್ಡದಲ್ಲ ಆರೋಗ್ಯ ದೊಡ್ಡದು. ಈ ಸರಳ ಸತ್ಯವನ್ನು ಅರ್ಥ ಮಾಡಿಕೊಂಡರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ’ ಎಂದು ತಿಳಿಸಿದರು.</p>.<p>‘ಆನಂದ ಯಾವುದೇ ಭೌತಿಕ ವಸ್ತುಗಳಲ್ಲಿಲ್ಲ. ಅದು ಆರೋಗ್ಯದಲ್ಲಿದೆ. ಅದನ್ನು ಸಂಪಾದಿಸಿದರೆ ಎಲ್ಲವನ್ನು ಸಂಪಾದಿಸಬಹುದು. ಬೇರೆಯವರ ಬಲವಂತಕ್ಕೆ ಯೋಗ ಮಾಡದೆ ವೈಯಕ್ತಿಕ ಹಿತಾಸಕ್ತಿಗೆ ಅಭ್ಯಾಸ ಮಾಡಬೇಕು’ ಎಂದು ಯೋಗಗುರು ಎಲ್.ಎಸ್.ಚಿನ್ಮಯಾನಂದ ಸಲಹೆ ನೀಡಿದರು.</p>.<p>‘ಯೋಗದಿಂದ ಮಾನಸಿಕ ಸದೃಢತೆ ಸಾಧ್ಯವಿದೆ. ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಚಿಕ್ಕ ಕಾರಣಕ್ಕೂ ಆತ್ಮಹತ್ಯೆ ಹಾದಿ ಹಿಡಿದಿರುವುದು ನೋವಿನ ಸಂಗತಿ. ಈ ಎಲ್ಲದಕ್ಕೂ ಯೋಗ ಮದ್ದಾಗಿದೆ’ ಎಂದು ಮುಖ್ಯ ಶಿಕ್ಷಕ ಕೆ.ಎನ್.ಮಹೇಶ್ ತಿಳಿಸಿದರು.<br> ‘ಆರೋಗ್ಯದಿಂದಲೇ ಎಲ್ಲವೂ ಸಾಧ್ಯವಿದೆ. ನಾವು ವಸ್ತುಗಳಿಗೆ ಆದ್ಯತೆ ನೀಡಿ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಮಾಡುತ್ತಿದ್ದೇವೆ. ನಮ್ಮ ಬದುಕು ಪರಿಸರಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಇದೇ ಅಸಮತೋಲನಕ್ಕೆ ಕಾರಣವಾಗಿ ಅನಾರೋಗ್ಯ ಹೆಚ್ಚಾಗಿದೆ’ ಎಂದರು.</p>.<p>ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಲ್.ಎಸ್.ಬಸವರಾಜ್, ಉಪನ್ಯಾಸಕ ಎಂ.ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>