<p><strong>ಹೊಸದುರ್ಗ:</strong> ಕೊರೊನಾ ಹರಡುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಹೆಚ್ಚಿನ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.</p>.<p>ಪಟ್ಟಣದಲ್ಲಿ ತಾಪಮಾನ ಶೇ 36ಕ್ಕೆ ಏರಿದ್ದು, ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಬಿಸಿಲಿನ ಝಳ ಇರುವುದರಿಂದ ದೇಹ ಬಿಸಿಯಾದಂತೆ ಆಗುತ್ತಿದೆ. ದೇಹದ ಉಷ್ಣಾಂಶ ಹೆಚ್ಚಳ ಕಂಡು ಹಾಗೂ ಸಾಮಾನ್ಯ ಶೀತ, ನೆಗಡಿ, ಕೆಮ್ಮು ಇರುವ ರೋಗಿಗಳು ಭಯದಿಂದ ಆಸ್ಪತ್ರೆಗೆ ದೌಡಾಯಿಸಿದರು.</p>.<p>ತಲೆನೋವು, ಮೈಕೈನೋವು, ಗಂಟಲು ನೋವು ಬಂದ ರೋಗಿಗಳು ತಮಗೂ ಕೊರೊನಾ ವೈರಸ್ತಾಕಿದೆಯೋ ಎಂಬ ಅನುಮಾನದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು.</p>.<p>ತಾಲ್ಲೂಕಿನ ವಿವಿಧೆಡೆಯಿಂದ ಹೆಚ್ಚಿನ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. 100 ಹಾಸಿಗೆಯ ಈ ಆಸ್ಪತ್ರೆಯಲ್ಲಿ ಕೇವಲ 4 ಮಂದಿ ವೈದ್ಯರು ಮಾತ್ರ ಕರ್ತವ್ಯದಲ್ಲಿ ನಿರ್ವಹಿಸುತ್ತಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು.</p>.<p>ಹಲವರು ಕರವಸ್ತ್ರ, ಟವಲ್, ಸೀರೆ ಸೆರಗಿನಲ್ಲಿ ಬಾಯಿ ಹಾಗೂ ಮೂಗನ್ನು ಮುಚ್ಚಿಕೊಂಡು ಸರತಿಯಲ್ಲಿ ನಿಂತು ಚಿಕಿತ್ಸೆ ಪಡೆದರು.</p>.<p>ಕಳೆದ ಸೋಮವಾರ 690 ಹೊರರೋಗಿಗಳು ದಾಖಲಾಗಿದ್ದರು. ಈ ವಾರ 768 ಹೊರರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಮಂಜೂರಾಗಿರುವ 11 ವೈದ್ಯರ ಹುದ್ದೆಗಳಲ್ಲಿ 7 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚರ್ಮ ವೈದ್ಯರೊಬ್ಬರು ರಜೆ ಹೋಗಿದ್ದಾರೆ. ಇನ್ನುಳಿದ 6 ವೈದ್ಯರಲ್ಲಿ ಆಡಳಿತ ವೈದ್ಯಾಧಿಕಾರಿ ಜಿಲ್ಲೆ ಹಾಗೂ ತಾಲ್ಲೂಕು ಸಭೆ, ಸಮಾರಂಭ ಮತ್ತು ಆರೋಗ್ಯ ಶಿಬಿರಗಳಿಗೆ ಹೋಗುತ್ತಿದ್ದಾರೆ. ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸಿದ ಮತ್ತೊಬ್ಬ ವೈದ್ಯರು ಬೆಳಿಗ್ಗೆ ರಜೆ ತೆಗೆದುಕೊಳ್ಳುತ್ತಾರೆ. ಇನ್ನುಳಿದ 4 ಮಂದಿ ವೈದ್ಯರು ಮಾತ್ರ ಪ್ರತಿದಿನ ಕಾರ್ಯ ನಿರ್ವಹಿಸುವಂತಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದರು.</p>.<p>ಕೋವಿಡ್–19 ರಡುವ ಭೀತಿ ಇರುವುದರಿಂದ ಎಲ್ಲಾ ವೈದ್ಯರು ಆಸ್ಪತ್ರೆಯಲ್ಲಿದ್ದು, ಸಕಾಲಕ್ಕೆ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ನೂಕುನುಗ್ಗಲು ಆಗುವುದಕ್ಕೆ ಅವಕಾಶ ಕೊಡಬಾರದು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ಕೊರೊನಾ ಹರಡುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಹೆಚ್ಚಿನ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.</p>.<p>ಪಟ್ಟಣದಲ್ಲಿ ತಾಪಮಾನ ಶೇ 36ಕ್ಕೆ ಏರಿದ್ದು, ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಬಿಸಿಲಿನ ಝಳ ಇರುವುದರಿಂದ ದೇಹ ಬಿಸಿಯಾದಂತೆ ಆಗುತ್ತಿದೆ. ದೇಹದ ಉಷ್ಣಾಂಶ ಹೆಚ್ಚಳ ಕಂಡು ಹಾಗೂ ಸಾಮಾನ್ಯ ಶೀತ, ನೆಗಡಿ, ಕೆಮ್ಮು ಇರುವ ರೋಗಿಗಳು ಭಯದಿಂದ ಆಸ್ಪತ್ರೆಗೆ ದೌಡಾಯಿಸಿದರು.</p>.<p>ತಲೆನೋವು, ಮೈಕೈನೋವು, ಗಂಟಲು ನೋವು ಬಂದ ರೋಗಿಗಳು ತಮಗೂ ಕೊರೊನಾ ವೈರಸ್ತಾಕಿದೆಯೋ ಎಂಬ ಅನುಮಾನದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು.</p>.<p>ತಾಲ್ಲೂಕಿನ ವಿವಿಧೆಡೆಯಿಂದ ಹೆಚ್ಚಿನ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. 100 ಹಾಸಿಗೆಯ ಈ ಆಸ್ಪತ್ರೆಯಲ್ಲಿ ಕೇವಲ 4 ಮಂದಿ ವೈದ್ಯರು ಮಾತ್ರ ಕರ್ತವ್ಯದಲ್ಲಿ ನಿರ್ವಹಿಸುತ್ತಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು.</p>.<p>ಹಲವರು ಕರವಸ್ತ್ರ, ಟವಲ್, ಸೀರೆ ಸೆರಗಿನಲ್ಲಿ ಬಾಯಿ ಹಾಗೂ ಮೂಗನ್ನು ಮುಚ್ಚಿಕೊಂಡು ಸರತಿಯಲ್ಲಿ ನಿಂತು ಚಿಕಿತ್ಸೆ ಪಡೆದರು.</p>.<p>ಕಳೆದ ಸೋಮವಾರ 690 ಹೊರರೋಗಿಗಳು ದಾಖಲಾಗಿದ್ದರು. ಈ ವಾರ 768 ಹೊರರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಮಂಜೂರಾಗಿರುವ 11 ವೈದ್ಯರ ಹುದ್ದೆಗಳಲ್ಲಿ 7 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚರ್ಮ ವೈದ್ಯರೊಬ್ಬರು ರಜೆ ಹೋಗಿದ್ದಾರೆ. ಇನ್ನುಳಿದ 6 ವೈದ್ಯರಲ್ಲಿ ಆಡಳಿತ ವೈದ್ಯಾಧಿಕಾರಿ ಜಿಲ್ಲೆ ಹಾಗೂ ತಾಲ್ಲೂಕು ಸಭೆ, ಸಮಾರಂಭ ಮತ್ತು ಆರೋಗ್ಯ ಶಿಬಿರಗಳಿಗೆ ಹೋಗುತ್ತಿದ್ದಾರೆ. ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸಿದ ಮತ್ತೊಬ್ಬ ವೈದ್ಯರು ಬೆಳಿಗ್ಗೆ ರಜೆ ತೆಗೆದುಕೊಳ್ಳುತ್ತಾರೆ. ಇನ್ನುಳಿದ 4 ಮಂದಿ ವೈದ್ಯರು ಮಾತ್ರ ಪ್ರತಿದಿನ ಕಾರ್ಯ ನಿರ್ವಹಿಸುವಂತಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದರು.</p>.<p>ಕೋವಿಡ್–19 ರಡುವ ಭೀತಿ ಇರುವುದರಿಂದ ಎಲ್ಲಾ ವೈದ್ಯರು ಆಸ್ಪತ್ರೆಯಲ್ಲಿದ್ದು, ಸಕಾಲಕ್ಕೆ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ನೂಕುನುಗ್ಗಲು ಆಗುವುದಕ್ಕೆ ಅವಕಾಶ ಕೊಡಬಾರದು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>