ಪೊಲೀಸರು ಪಟ್ಟಣದಲ್ಲಿ ಯಾವುದೇ ವಹಿವಾಟು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದರು. ಮೆಡಿಕಲ್ ಸ್ಟೋರ್, ತರಕಾರಿ ಅಂಗಡಿ ತೆರೆದಿದ್ದು ಬಿಟ್ಟರೆ ಬೇರೆ ಯಾವ ಅಂಗಡಿಗಳನ್ನೂ ತೆರೆಯಲು ಬಿಡಲಿಲ್ಲ. ಮನೆಯಿಂದ ಹೊರಬಂದವರಿಗೆ ಲಾಠಿ ರುಚಿ ತೋರಿಸುತ್ತಿದ್ದರು. ಇದರಿಂದ ಇಡೀ ಪಟ್ಟಣ ಬಿಕೋ ಎನ್ನುತ್ತಿತ್ತು. ಹಳ್ಳಿಗಳಲ್ಲಿ ಮಾತ್ರ ಹಬ್ಬದ ಸಂಭ್ರಮ ಕಂಡುಬಂತು.