‘ಶುಶ್ರೂಷಕಿಯರು, ‘ಡಿ’ ಗ್ರೂಪ್ ನೌಕರರೂ ಭೀತಿಗೆ ಒಳಗಾಗಿದ್ದರು. ನಿರ್ಭೀತಿಯಿಂದ ಕೆಲಸ ಮಾಡಲು ಅವರಲ್ಲಿದ್ದ ಆತಂಕ ಹೋಗಲಾಡಿಸಿದ್ದೇವೆ. ಸೋಂಕಿತರಿಂದ ಕೋವಿಡ್-19 ಹರಡದಂತೆ ಕೈಗೊಳ್ಳಬೇಕಾದ ವಿಧಾನದ ಕುರಿತು ಮಾಹಿತಿ ನೀಡಿದ್ದೇವೆ. ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳ ಸಂಘದಿಂದ ‘ಚವನ್ ಪ್ರಾಶ್’ ಸೇರಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳನ್ನು ಸಿಬ್ಬಂದಿಗೆ ನೀಡಿದ್ದೇವೆ. ಸೋಂಕಿತರಿಗೆ ಯಾವುದೇ ಔಷಧವನ್ನು ನೀಡಿಲ್ಲ’ ಎಂದರು.