ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 31 ಜನ ಗುಣಮುಖರಾಗಿದ್ದಾರೆ. ವರದಿಯಲ್ಲಿ ಹೊಸದಾಗಿ 39 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13,534ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 1,958 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ವರದಿಯಲ್ಲಿ 39 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.
‘ಕೋವಿಡ್ ಸೋಂಕಿತರಲ್ಲಿ ಈವರೆಗೆ 13,182 ಜನರು ಗುಣಮುಖರಾಗಿದ್ದಾರೆ. 64 ಜನರು ಕೋವಿಡ್ನಿಂದ ಮೃತಪಟ್ಟಿದ್ದು, 287 ಸಕ್ರಿಯ ಪ್ರಕರಣಗಳಿವೆ. 644 ಜನರ ವರದಿ ಬರುವುದು ಬಾಕಿ ಇದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.