‘ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಇಬ್ಬರು ಪಾಲ್ಗೊಂಡಿದ್ದರು. ಅವರ ವಿವರಗಳನ್ನು ಪಡೆದು ಪತ್ತೆ ಮಾಡಿದ್ದೇವೆ. ದೆಹಲಿಯಿಂದ ಮರಳಿ 20 ದಿನಗಳು ಕಳೆದಿವೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ಆದರೂ, ಅವರನ್ನು ಕ್ವಾರಂಟೈನ್ಗೆ ಇಡಲು ತಾಕೀತು ಮಾಡಲಾಗಿದೆ. ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.