<p><strong>ಚಿತ್ರದುರ್ಗ: </strong>ಜಿಲ್ಲೆಯಲ್ಲಿ ಗುರುವಾರ 182 ಜನರಿಗೆ ಕೊವೀಡ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 46 ಜನರು ಗುಣಮುಖರಾಗಿದ್ದಾರೆ. ಇವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಗುಣಮುಖರಾದ ಸಂಖ್ಯೆ 8,004ಕ್ಕೆ ಏರಿಕೆಯಾಗಿದೆ.</p>.<p>ಗುರುವಾರ 1,040 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 182 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೋವಿಡ್ನಿಂದ ಈವರೆಗೆ 39 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 781 ಸಕ್ರಿಯ ಪ್ರಕರಣಗಳಿವೆ.</p>.<p>ಸೋಂಕಿತರಿಗೆ ಸಂಬಂಧಿಸಿದಂತೆ 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. 64,277 ಜನರ ವರದಿ ನೆಗೆಟೀವ್ ಬಂದಿದೆ. ಇನ್ನೂ 127 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲೆಯಲ್ಲಿ ಗುರುವಾರ 182 ಜನರಿಗೆ ಕೊವೀಡ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 46 ಜನರು ಗುಣಮುಖರಾಗಿದ್ದಾರೆ. ಇವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಗುಣಮುಖರಾದ ಸಂಖ್ಯೆ 8,004ಕ್ಕೆ ಏರಿಕೆಯಾಗಿದೆ.</p>.<p>ಗುರುವಾರ 1,040 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 182 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೋವಿಡ್ನಿಂದ ಈವರೆಗೆ 39 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 781 ಸಕ್ರಿಯ ಪ್ರಕರಣಗಳಿವೆ.</p>.<p>ಸೋಂಕಿತರಿಗೆ ಸಂಬಂಧಿಸಿದಂತೆ 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. 64,277 ಜನರ ವರದಿ ನೆಗೆಟೀವ್ ಬಂದಿದೆ. ಇನ್ನೂ 127 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>