<p><strong>ಚಿತ್ರದುರ್ಗ</strong>: ಪ್ರಿಯತಮೆಯ ಪತಿಯನ್ನು ಕೊಲೆ ಮಾಡಿದ ಅಪರಾಧಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ಆಂಧ್ರಪ್ರದೇಶದ ಕಲ್ಯಾಣದುರ್ಗ ತಾಲ್ಲೂಕಿನ ಸೋಮಶೇಖರ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಲ್ಯಾಣದುರ್ಗ ತಾಲ್ಲೂಕಿನ ಬಂಡೆಮೀದಪಲ್ಲಿ ಗ್ರಾಮದ ಚಾಕಲಿ ರಮೇಶ ಎಂಬುವರನ್ನು 2016ರಲ್ಲಿ ಕೊಲೆ ಮಾಡಿದ್ದನು. ವಿಚಾರಣೆ ನಡೆಸಿದ ನ್ಯಾಯಾಧೀಶ ಬನ್ನಿಕಟ್ಟೆ ಆರ್.ಹನುಮಂತಪ್ಪ ಅವರು ಆದೇಶ ನೀಡಿದ್ದಾರೆ.</p>.<p>ರಮೇಶ ಹಾಗೂ ನೇತ್ರಮ್ಮ ವಿವಾಹವಾಗಿದ್ದರು. ಮದುವೆಗೂ ಮೊದಲೇ ನೇತ್ರಮ್ಮನನ್ನು ಸೋಮಶೇಖರ ಪ್ರೀತಿಸುತ್ತಿದ್ದನು. ನೇತ್ರಮ್ಮನ ಪತಿಯನ್ನು ಪರಿಚಯ ಮಾಡಿಕೊಂಡ ಅಪರಾಧಿ ಆಗಾಗ ಮನೆಗೆ ಭೇಟಿ ನೀಡುತ್ತಿದ್ದನು. ಪತ್ನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದನ್ನು ಗಮನಿಸಿದ ರಮೇಶ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದನು.</p>.<p>ರಮೇಶನನ್ನು ಕೊಲೆ ಮಾಡಲು ಸಂಚು ರೂಪಿಸಿದ ಸೋಮಶೇಖರ, ಬೆಂಗಳೂರಿಗೆ ತೆರಳುವ ನೆಪ ಮಾಡಿಕೊಂಡು ಪರಶುರಾಂಪುರ ಸಮೀಪದ ನಾಗಪ್ಪನಹಳ್ಳಿ ಗೇಟಿಗೆ ಕರೆಸಿಕೊಂಡಿದ್ದನು. ಪಿಲ್ಲಹಳ್ಳಿ ಸಮೀಪ ಕೊಲೆ ಮಾಡಿ ಪರಾರಿಯಾಗಿದ್ದನು. ಈ ಪ್ರಕರಣದ ತನಿಖೆ ನಡೆಸಿದ ಪರಶುರಾಂಪುರ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಅಭಿಯೋಜಕ ಬಿ.ಮಲ್ಲೇಶಪ್ಪ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಪ್ರಿಯತಮೆಯ ಪತಿಯನ್ನು ಕೊಲೆ ಮಾಡಿದ ಅಪರಾಧಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ಆಂಧ್ರಪ್ರದೇಶದ ಕಲ್ಯಾಣದುರ್ಗ ತಾಲ್ಲೂಕಿನ ಸೋಮಶೇಖರ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಲ್ಯಾಣದುರ್ಗ ತಾಲ್ಲೂಕಿನ ಬಂಡೆಮೀದಪಲ್ಲಿ ಗ್ರಾಮದ ಚಾಕಲಿ ರಮೇಶ ಎಂಬುವರನ್ನು 2016ರಲ್ಲಿ ಕೊಲೆ ಮಾಡಿದ್ದನು. ವಿಚಾರಣೆ ನಡೆಸಿದ ನ್ಯಾಯಾಧೀಶ ಬನ್ನಿಕಟ್ಟೆ ಆರ್.ಹನುಮಂತಪ್ಪ ಅವರು ಆದೇಶ ನೀಡಿದ್ದಾರೆ.</p>.<p>ರಮೇಶ ಹಾಗೂ ನೇತ್ರಮ್ಮ ವಿವಾಹವಾಗಿದ್ದರು. ಮದುವೆಗೂ ಮೊದಲೇ ನೇತ್ರಮ್ಮನನ್ನು ಸೋಮಶೇಖರ ಪ್ರೀತಿಸುತ್ತಿದ್ದನು. ನೇತ್ರಮ್ಮನ ಪತಿಯನ್ನು ಪರಿಚಯ ಮಾಡಿಕೊಂಡ ಅಪರಾಧಿ ಆಗಾಗ ಮನೆಗೆ ಭೇಟಿ ನೀಡುತ್ತಿದ್ದನು. ಪತ್ನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದನ್ನು ಗಮನಿಸಿದ ರಮೇಶ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದನು.</p>.<p>ರಮೇಶನನ್ನು ಕೊಲೆ ಮಾಡಲು ಸಂಚು ರೂಪಿಸಿದ ಸೋಮಶೇಖರ, ಬೆಂಗಳೂರಿಗೆ ತೆರಳುವ ನೆಪ ಮಾಡಿಕೊಂಡು ಪರಶುರಾಂಪುರ ಸಮೀಪದ ನಾಗಪ್ಪನಹಳ್ಳಿ ಗೇಟಿಗೆ ಕರೆಸಿಕೊಂಡಿದ್ದನು. ಪಿಲ್ಲಹಳ್ಳಿ ಸಮೀಪ ಕೊಲೆ ಮಾಡಿ ಪರಾರಿಯಾಗಿದ್ದನು. ಈ ಪ್ರಕರಣದ ತನಿಖೆ ನಡೆಸಿದ ಪರಶುರಾಂಪುರ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಅಭಿಯೋಜಕ ಬಿ.ಮಲ್ಲೇಶಪ್ಪ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>