ರಮೇಶನನ್ನು ಕೊಲೆ ಮಾಡಲು ಸಂಚು ರೂಪಿಸಿದ ಸೋಮಶೇಖರ, ಬೆಂಗಳೂರಿಗೆ ತೆರಳುವ ನೆಪ ಮಾಡಿಕೊಂಡು ಪರಶುರಾಂಪುರ ಸಮೀಪದ ನಾಗಪ್ಪನಹಳ್ಳಿ ಗೇಟಿಗೆ ಕರೆಸಿಕೊಂಡಿದ್ದನು. ಪಿಲ್ಲಹಳ್ಳಿ ಸಮೀಪ ಕೊಲೆ ಮಾಡಿ ಪರಾರಿಯಾಗಿದ್ದನು. ಈ ಪ್ರಕರಣದ ತನಿಖೆ ನಡೆಸಿದ ಪರಶುರಾಂಪುರ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಅಭಿಯೋಜಕ ಬಿ.ಮಲ್ಲೇಶಪ್ಪ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.