<p><strong>ಚಿತ್ರದುರ್ಗ: </strong>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರು ಸೇರಿ ಜಿಲ್ಲೆಯ 9 ಜನರಿಗೆ ಕೊರೊನಾ ಸೋಂಕು ಅಂಟಿದೆ. ಸೋಂಕಿಗೆ ಸಂಬಂಧಿಸಿದ ವರದಿಯನ್ನು ಖಚಿತಪಡಿಸಿಕೊಳ್ಳಲು ಶಿವಮೊಗ್ಗದ ಪ್ರಯೋಗಾಲಯಕ್ಕೆ ಗಂಟಲು ದ್ರವದ ಮಾದರಿ ರವಾನೆ ಮಾಡಲಾಗಿದೆ.</p>.<p>ಚಿತ್ರದುರ್ಗದ ಕರುವಿನಕಟ್ಟೆ ವೃತ್ತ, ಕೆಳಗೋಟೆ, ಜಿಲ್ಲಾ ಆಸ್ಪತ್ರೆಯ ವೈದ್ಯ ಸೇರಿ ಹೊಳಲ್ಕೆರೆಯ ಇಬ್ಬರು ಹಾಗೂ ಹಿರಿಯೂರಿನ ಮೂವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರಿಗೆ ಸೋಂಕು ಅಂಟಿರುವುದು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಚಿಕಿತ್ಸೆ ನೀಡಿ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದ ವೈದ್ಯರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ.</p>.<p>‘ಪ್ರಾಥಮಿಕ ಪರೀಕ್ಷೆಯಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಪಾಸಿಟಿವ್ ಬಂದಿರುವ ಪ್ರತಿಯೊಬ್ಬರ ಗಂಟಲು ದ್ರವದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಲಾಗುತ್ತದೆ. ಪ್ರಯೋಗಾಲಯದ ವರದಿ ಖಚಿತಪಡಿಸಲಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ತಿಳಿಸಿದ್ದಾರೆ.</p>.<p>‘ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಎಲ್ಲರೂ ರೋಗಿಗಳ ಪ್ರಾಥಮಿಕ ಸಂಪರ್ಕಿತರು. ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಲ್ಲಿ ಸೋಂಕು ಪತ್ತೆಯಾಗಿದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಬರುವ ಮುನ್ನ ಆಲೋಚಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 14, ಹಿರಿಯೂರು ತಾಲ್ಲೂಕಿನ ಧರ್ಮಪುರ ಕೇರ್ ಸೆಂಟರ್ನಲ್ಲಿ 4, ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಚಳ್ಳಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 3, ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ 2 ಹಾಗೂ ನಾಯಕನಹಟ್ಟಿಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಕೋವಿಡ್ ರೋಗದಿಂದ ಮೃತಪಟ್ಟಿದ್ದಾರೆ.</p>.<p class="Subhead"><strong>ಹಳ್ಳಿಗೆ ಬೆಂಗಳೂರು ಭಯ</strong></p>.<p>ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಲಾಕ್ಡೌನ್ಗೆ ನಿರ್ಧರಿಸಿದ್ದರಿಂದ ರಾಜಧಾನಿಯ ಬಹುತೇಕರು ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಕೋಟೆನಾಡಿನ ಬಹುತೇಕ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.</p>.<p>ಬೆಂಗಳೂರಿಗೆ ಕೆಲಸ ಅರಸಿ ಹೋಗುವವರ ಸಂಖ್ಯೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚು. ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕಿನ ಹಲವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಾಗೂ ಲಾಕ್ಡೌನ್ ಘೋಷಣೆಯಾಗಿರುವುದರಿಂದ ಭಾನುವಾರದಿಂದಲೇ ಗ್ರಾಮಗಳಿಗೆ ಮರಳುತ್ತಿದ್ದಾರೆ.</p>.<p>ರಾಜ್ಯ ರಾಜಧಾನಿಯಿಂದ ಮರಳುವವರನ್ನು ಗ್ರಾಮಕ್ಕೆ ಸೇರಿಸಲು ವಿರೋಧ ವ್ಯಕ್ತವಾಗುತ್ತಿದೆ. ಕೆಲವು ಹಳ್ಳಿಗಳು ಸ್ವಯಂ ದಿಗ್ಬಂಧನಕ್ಕೂ ಒಳಗಾಗಿವೆ. ಕ್ವಾರಂಟೈನ್ನಲ್ಲಿ ಇರುವಂತೆ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸ್ಥಳೀಯರು ಒತ್ತಡ ಹೇರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರು ಸೇರಿ ಜಿಲ್ಲೆಯ 9 ಜನರಿಗೆ ಕೊರೊನಾ ಸೋಂಕು ಅಂಟಿದೆ. ಸೋಂಕಿಗೆ ಸಂಬಂಧಿಸಿದ ವರದಿಯನ್ನು ಖಚಿತಪಡಿಸಿಕೊಳ್ಳಲು ಶಿವಮೊಗ್ಗದ ಪ್ರಯೋಗಾಲಯಕ್ಕೆ ಗಂಟಲು ದ್ರವದ ಮಾದರಿ ರವಾನೆ ಮಾಡಲಾಗಿದೆ.</p>.<p>ಚಿತ್ರದುರ್ಗದ ಕರುವಿನಕಟ್ಟೆ ವೃತ್ತ, ಕೆಳಗೋಟೆ, ಜಿಲ್ಲಾ ಆಸ್ಪತ್ರೆಯ ವೈದ್ಯ ಸೇರಿ ಹೊಳಲ್ಕೆರೆಯ ಇಬ್ಬರು ಹಾಗೂ ಹಿರಿಯೂರಿನ ಮೂವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರಿಗೆ ಸೋಂಕು ಅಂಟಿರುವುದು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಚಿಕಿತ್ಸೆ ನೀಡಿ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದ ವೈದ್ಯರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ.</p>.<p>‘ಪ್ರಾಥಮಿಕ ಪರೀಕ್ಷೆಯಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಪಾಸಿಟಿವ್ ಬಂದಿರುವ ಪ್ರತಿಯೊಬ್ಬರ ಗಂಟಲು ದ್ರವದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಲಾಗುತ್ತದೆ. ಪ್ರಯೋಗಾಲಯದ ವರದಿ ಖಚಿತಪಡಿಸಲಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ತಿಳಿಸಿದ್ದಾರೆ.</p>.<p>‘ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಎಲ್ಲರೂ ರೋಗಿಗಳ ಪ್ರಾಥಮಿಕ ಸಂಪರ್ಕಿತರು. ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಲ್ಲಿ ಸೋಂಕು ಪತ್ತೆಯಾಗಿದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಬರುವ ಮುನ್ನ ಆಲೋಚಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 14, ಹಿರಿಯೂರು ತಾಲ್ಲೂಕಿನ ಧರ್ಮಪುರ ಕೇರ್ ಸೆಂಟರ್ನಲ್ಲಿ 4, ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಚಳ್ಳಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 3, ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ 2 ಹಾಗೂ ನಾಯಕನಹಟ್ಟಿಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಕೋವಿಡ್ ರೋಗದಿಂದ ಮೃತಪಟ್ಟಿದ್ದಾರೆ.</p>.<p class="Subhead"><strong>ಹಳ್ಳಿಗೆ ಬೆಂಗಳೂರು ಭಯ</strong></p>.<p>ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಲಾಕ್ಡೌನ್ಗೆ ನಿರ್ಧರಿಸಿದ್ದರಿಂದ ರಾಜಧಾನಿಯ ಬಹುತೇಕರು ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಕೋಟೆನಾಡಿನ ಬಹುತೇಕ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.</p>.<p>ಬೆಂಗಳೂರಿಗೆ ಕೆಲಸ ಅರಸಿ ಹೋಗುವವರ ಸಂಖ್ಯೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚು. ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕಿನ ಹಲವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಾಗೂ ಲಾಕ್ಡೌನ್ ಘೋಷಣೆಯಾಗಿರುವುದರಿಂದ ಭಾನುವಾರದಿಂದಲೇ ಗ್ರಾಮಗಳಿಗೆ ಮರಳುತ್ತಿದ್ದಾರೆ.</p>.<p>ರಾಜ್ಯ ರಾಜಧಾನಿಯಿಂದ ಮರಳುವವರನ್ನು ಗ್ರಾಮಕ್ಕೆ ಸೇರಿಸಲು ವಿರೋಧ ವ್ಯಕ್ತವಾಗುತ್ತಿದೆ. ಕೆಲವು ಹಳ್ಳಿಗಳು ಸ್ವಯಂ ದಿಗ್ಬಂಧನಕ್ಕೂ ಒಳಗಾಗಿವೆ. ಕ್ವಾರಂಟೈನ್ನಲ್ಲಿ ಇರುವಂತೆ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸ್ಥಳೀಯರು ಒತ್ತಡ ಹೇರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>