ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಏಳು ಜನರು ಮಂಗಳವಾರ ಗುಣಮುಖರಾಗಿದ್ದಾರೆ. ಈವರೆಗೆ 14,399 ಜನರು ಸೋಂಕು ಮುಕ್ತರಾಗಿದ್ದು, ಜಿಲ್ಲೆಯಲ್ಲಿ 107 ಸಕ್ರಿಯ ಪ್ರಕರಣಗಳಿವೆ. 530 ಜನರ ವರದಿ ಬರುವುದು ಬಾಕಿ ಇದೆ. 68 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.