<p><strong>ಮೊಳಕಾಲ್ಮುರು: </strong>ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಕೋವಿಡ್ ಪ್ರರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ರೈತಸಂಘ ಹಾಗೂ ಹಸಿರುಸೇನೆ ಮತ್ತು ಎಐಕೆಎಸ್ ಸಂಘನೆಗಳುಆರೋಪಿಸಿವೆ.</p>.<p>ಬುಧವಾರ ಈ ಸಂಬಂಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ‘ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ವಿರೋಧಪಕ್ಷವಾಗಿ ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಬೇಕಾದ ಕಾಂಗ್ರೆಸ್ ಪಾದಯಾತ್ರೆ ಮೂಲಕ ವ್ಯವಸ್ಥೆಯನ್ನು ಕೆಡಿಸುತ್ತಿದೆ’ ಎಂದು ದೂರಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸುಖಾ ಸುಮ್ಮನೇ ಕಾಲಹರಣ ಮಾಡಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಲ್ಲ. ಈಗ ನಿಯಮಗಳನ್ನು ಗಾಳಿಗೆ ತೂರಿ ಪಾದಯಾತ್ರೆ ನಡೆಸಿ ಸಾವಿನ ಮೇಲೆ ಸವಾರಿ ಮಾಡಲು ಮುಂದಾಗಿದೆ’ ಎಂದರು.</p>.<p>‘ತಾಲ್ಲೂಕು ಹಲವು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿದೆ. ಬೆಳೆ ಪರಿಹಾರ ಕೊಡಿಸುವುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ರೈತರಿಗೆ ನಂಬಿಸಿ ಮಂಕುಬೂದಿ ಎರಚುತ್ತಿದ್ದಾರೆ. ಇದರಿಂದ ಜನರು ಸಾಲಗಾರರಾಗಿದ್ದಾರೆ. ಬ್ಯಾಂಕ್ ಉಪಟಳಕ್ಕೆ ಗ್ರಾಮಗಳನ್ನು ಬಿಟ್ಟು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆತ್ಮಹತ್ಯೆ ದಾರಿ ತುಳಿಯುವುದಕ್ಕೂ ಮುನ್ನ ಈ ಬಗ್ಗೆ ಗಮನಹರಿಸಬೇಕು’ ಎಂದು ಮನವಿ<br />ಮಾಡಿದರು.</p>.<p>ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಬೆಳಗಲ್ ಈಶ್ವರಯ್ಯ ಸ್ವಾಮಿ, ಜಾಫರ್ ಷರೀಫ್, ಕೊಂಡಾಪುರ ಪರಮೇಶ್ವರಪ್ಪ, ಕನಕ ಶಿವಮೂರ್ತಿ, ಮಂಜುನಾಥ್, ಯಲ್ಲಪ್ಪ, ಟಿ. ಬಸವರಾಜ್, ಕುರಾಕಲಹಟ್ಟಿ ನಾಗರಾಜ್, ನಿಂಗಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: </strong>ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಕೋವಿಡ್ ಪ್ರರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ರೈತಸಂಘ ಹಾಗೂ ಹಸಿರುಸೇನೆ ಮತ್ತು ಎಐಕೆಎಸ್ ಸಂಘನೆಗಳುಆರೋಪಿಸಿವೆ.</p>.<p>ಬುಧವಾರ ಈ ಸಂಬಂಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ‘ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ವಿರೋಧಪಕ್ಷವಾಗಿ ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಬೇಕಾದ ಕಾಂಗ್ರೆಸ್ ಪಾದಯಾತ್ರೆ ಮೂಲಕ ವ್ಯವಸ್ಥೆಯನ್ನು ಕೆಡಿಸುತ್ತಿದೆ’ ಎಂದು ದೂರಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸುಖಾ ಸುಮ್ಮನೇ ಕಾಲಹರಣ ಮಾಡಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಲ್ಲ. ಈಗ ನಿಯಮಗಳನ್ನು ಗಾಳಿಗೆ ತೂರಿ ಪಾದಯಾತ್ರೆ ನಡೆಸಿ ಸಾವಿನ ಮೇಲೆ ಸವಾರಿ ಮಾಡಲು ಮುಂದಾಗಿದೆ’ ಎಂದರು.</p>.<p>‘ತಾಲ್ಲೂಕು ಹಲವು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿದೆ. ಬೆಳೆ ಪರಿಹಾರ ಕೊಡಿಸುವುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ರೈತರಿಗೆ ನಂಬಿಸಿ ಮಂಕುಬೂದಿ ಎರಚುತ್ತಿದ್ದಾರೆ. ಇದರಿಂದ ಜನರು ಸಾಲಗಾರರಾಗಿದ್ದಾರೆ. ಬ್ಯಾಂಕ್ ಉಪಟಳಕ್ಕೆ ಗ್ರಾಮಗಳನ್ನು ಬಿಟ್ಟು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆತ್ಮಹತ್ಯೆ ದಾರಿ ತುಳಿಯುವುದಕ್ಕೂ ಮುನ್ನ ಈ ಬಗ್ಗೆ ಗಮನಹರಿಸಬೇಕು’ ಎಂದು ಮನವಿ<br />ಮಾಡಿದರು.</p>.<p>ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಬೆಳಗಲ್ ಈಶ್ವರಯ್ಯ ಸ್ವಾಮಿ, ಜಾಫರ್ ಷರೀಫ್, ಕೊಂಡಾಪುರ ಪರಮೇಶ್ವರಪ್ಪ, ಕನಕ ಶಿವಮೂರ್ತಿ, ಮಂಜುನಾಥ್, ಯಲ್ಲಪ್ಪ, ಟಿ. ಬಸವರಾಜ್, ಕುರಾಕಲಹಟ್ಟಿ ನಾಗರಾಜ್, ನಿಂಗಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>