<p><strong>ಚಿತ್ರದುರ್ಗ</strong>: ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 98 ಜನ ಒಂದೇ ದಿನ ಗುಣಮುಖರಾಗಿ ಬಿಡುಗಡೆಯಾಗಿದ್ದು ಆಶಾಭಾವನೆ ಮೂಡಿಸಿದೆ. ಗುಣಮುಖರಾಗುವವರ ಪ್ರಮಾಣ ದಿನ ಕಳೆದಂತೆ ಏರಿಕೆಯಾಗುತ್ತಿದೆ.</p>.<p>ಈವರೆಗೆ ಒಟ್ಟು 472 ಜನರು ಗುಣಮುಖರಾಗಿದ್ದು, 349 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗಿಂತ ಗುಣಮುಖರಾಗುವ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಲ್ಲಿ ಸಂತಸ ಮೂಡಿಸಿದೆ.</p>.<p>ಜಿಲ್ಲೆಯಲ್ಲಿ ಬುಧವಾರ 948 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 24 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 837ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 8, ಹೊಳಲ್ಕೆರೆ 2, ಹಿರಿಯೂರು 6, ಚಳ್ಳಕೆರೆ 6, ಹೊಸದುರ್ಗ 1 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.</p>.<p>349 ಸಕ್ರಿಯ ಪ್ರಕರಣಗಳಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 70, ಭರಮಸಾಗರ10, ಧರ್ಮಪುರ 30, ಪರಶುರಾಂಪುರ12, ಬೆಲಗೂರು 12, ರಾಂಪುರ 8, ಮರಡಿಹಳ್ಳಿ 26, ನಾಯಕನಹಟ್ಟಿ 7, ಬಿ.ದುರ್ಗ- 9, ಚಿತ್ರದುರ್ಗದ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ 10 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೊಳಕಾಲ್ಮೂರಿನ ಆದರ್ಶ ಶಾಲೆಯಲ್ಲಿ 12, ಚಳ್ಳಕೆರೆ ಬಿಸಿಎಂ ಹಾಸ್ಟೆಲ್ನಲ್ಲಿ 31, ಹೊಸದುರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 12, ಹಿರಿಯೂರು ತಾಲ್ಲೂಕು ದೇವರಕೋಟ ಮೊರಾರ್ಜಿ ಶಾಲೆಯಲ್ಲಿ 5 ಜನರು ದಾಖಲಾಗಿದ್ದಾರೆ. 65 ಜನರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 98 ಜನ ಒಂದೇ ದಿನ ಗುಣಮುಖರಾಗಿ ಬಿಡುಗಡೆಯಾಗಿದ್ದು ಆಶಾಭಾವನೆ ಮೂಡಿಸಿದೆ. ಗುಣಮುಖರಾಗುವವರ ಪ್ರಮಾಣ ದಿನ ಕಳೆದಂತೆ ಏರಿಕೆಯಾಗುತ್ತಿದೆ.</p>.<p>ಈವರೆಗೆ ಒಟ್ಟು 472 ಜನರು ಗುಣಮುಖರಾಗಿದ್ದು, 349 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗಿಂತ ಗುಣಮುಖರಾಗುವ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಲ್ಲಿ ಸಂತಸ ಮೂಡಿಸಿದೆ.</p>.<p>ಜಿಲ್ಲೆಯಲ್ಲಿ ಬುಧವಾರ 948 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 24 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 837ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 8, ಹೊಳಲ್ಕೆರೆ 2, ಹಿರಿಯೂರು 6, ಚಳ್ಳಕೆರೆ 6, ಹೊಸದುರ್ಗ 1 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.</p>.<p>349 ಸಕ್ರಿಯ ಪ್ರಕರಣಗಳಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 70, ಭರಮಸಾಗರ10, ಧರ್ಮಪುರ 30, ಪರಶುರಾಂಪುರ12, ಬೆಲಗೂರು 12, ರಾಂಪುರ 8, ಮರಡಿಹಳ್ಳಿ 26, ನಾಯಕನಹಟ್ಟಿ 7, ಬಿ.ದುರ್ಗ- 9, ಚಿತ್ರದುರ್ಗದ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ 10 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೊಳಕಾಲ್ಮೂರಿನ ಆದರ್ಶ ಶಾಲೆಯಲ್ಲಿ 12, ಚಳ್ಳಕೆರೆ ಬಿಸಿಎಂ ಹಾಸ್ಟೆಲ್ನಲ್ಲಿ 31, ಹೊಸದುರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 12, ಹಿರಿಯೂರು ತಾಲ್ಲೂಕು ದೇವರಕೋಟ ಮೊರಾರ್ಜಿ ಶಾಲೆಯಲ್ಲಿ 5 ಜನರು ದಾಖಲಾಗಿದ್ದಾರೆ. 65 ಜನರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>