ತಾಲ್ಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್ ಹಾಗೂಅಬ್ಬಿನಹೊಳೆ ಪಿಎಸ್ಐ ಚಂದ್ರಶೇಖರ್ ನೇತೃತ್ವದಲ್ಲಿ ಗ್ರಾಮಕ್ಕೆ ಧಾವಿಸಿದ ತಂಡ ಗ್ರಾಮಸ್ಥರ ಮನವೊಲಿಸಿದೆ. ಕುಟುಂಬದ ಐವರು ಸದಸ್ಯರನ್ನು ತಪಾಸಣೆಗೆ ಒಳಪಡಿಸಿದೆ. ಆದರೆ, ಯಾರಲ್ಲೂ ರೋಗ ಲಕ್ಷಣಗಳು ಕಂಡುಬಂದಿಲ್ಲ. ‘ಕೋವಿಡ್–19’ ಬಲಿಯಾದ ವ್ಯಕ್ತಿಗೂ ಹಾಗೂ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಖಾತ್ರಿಯಾಗಿದೆ. ಗ್ರಾಮಸ್ಥರ ಅನುಮಾನವನ್ನು ನಿವಾರಿಸುವ ಉದ್ದೇಶದಿಂದ 14 ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕವಾಗಿ ವಾಸ ಮಾಡುವಂತೆ ಸೂಚನೆ ನೀಡಲಾಗಿದೆ.