ಚಿತ್ತರಗಿ ವಿಜಯ ಮಹಾಂತೇಶ ಮಠಕ್ಕೆ ಒಳಪಟ್ಟಿರುವ ಸಿದ್ದಯ್ಯನಕೋಟೆ ಶಾಖಾಮಠ ಸಾಮಾನ್ಯ ಪೀಠ. ದಲಿತ ಜನಾಂಗಕ್ಕೆ ಸೇರಿದಬಸವಲಿಂಗ ಸ್ವಾಮೀಜಿಯನ್ನು ಇದರ ಪೀಠಾಧಿಪತಿ ಮಾಡಿದ್ದರಿಂದ ಮಠ ದೇಶದ ಗಮನ ಸೆಳೆದಿತ್ತು. ಈ ವಿಷಯದಿಂದಾಗಿ ಮಠ ದೊಡ್ಡಮಟ್ಟದಲ್ಲಿ ವಿವಾದಕ್ಕೀಡಾಗಿತ್ತು. ಆದರೆ, ಸ್ವಾಮೀಜಿಯ ದುಶ್ಚಟ ಬಿಡಿಸುವ ಪಾದಯಾತ್ರೆ, ಶೈಕ್ಷಣಿಕ ಅಭಿವೃದ್ಧಿ, ಮೂಢನಂಬಿಕೆ ವಿರುದ್ಧದ ಹೋರಾಟ, ಸರಳತೆ ಜನರನ್ನು ಮಠದತ್ತ ಸೆಳೆಯುವಂತೆ
ಮಾಡಿದೆ.