<p><strong>ಚಿತ್ರದುರ್ಗ: </strong>‘ಕಟ್ಟಡ ಕಾರ್ಮಿಕರಿಗೆ ಸರ್ಕಾರ ಕಳೆದ ವಾರ ಘೋಷಿಸಿರುವ ₹ 525 ಕೋಟಿ ಪರಿಹಾರವೂ ಸರ್ಕಾರದಲ್ಲ. ಅದು ಕಟ್ಟಡ ಕಾರ್ಮಿಕರ ಜೀವ ವಿಮಾ ಹಣವಾಗಿದೆ. ಅದರಲ್ಲಿ ತಲಾ ₹ 3 ಸಾವಿರ ಸಹಾಯಧನ ಘೋಷಿಸಿರುವುದು ಎಷ್ಟು ಸರಿ’ ಎಂದು ಕೆಪಿಸಿಸಿ ಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಪ್ರಶ್ನಿಸಿದರು.</p>.<p>‘ಕಟ್ಟಡ ಕಾರ್ಮಿಕರು ಕಟ್ಟಿರುವ ವಿಮಾ ಕಂತಿನ ಮೊತ್ತದಲ್ಲೇ ಪರಿಹಾರ ನೀಡಲಾಗುತ್ತಿದೆಯೇ ಹೊರತು ಸರ್ಕಾರ ಪ್ರತ್ಯೇಕ ಅನುದಾನ ನೀಡಿಲ್ಲ. ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದಾರೆ. ನಿಜಕ್ಕೂ ಸರ್ಕಾರಕ್ಕೆ ಕಾಳಜಿ ಇದ್ದರೆ, ಸಂಘಟಿತ–ಅಸಂಘಟಿತ ಎನ್ನದೇ ಎಲ್ಲಾ ಕಾರ್ಮಿಕರಿಗೂ ₹ 10 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ಕಾರ್ಯಕರ್ತರು ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರ ಹೆಸರು ನೋಂದಾಯಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ’ ಎಂದ ಅವರು, ‘ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬುದಕ್ಕೆ ಬಿಜೆಪಿ ನಾಯಕರು ಸೂಕ್ತ ದಾಖಲೆ ಒದಗಿಸಬೇಕು’ ಎಂದು ಸವಾಲು ಹಾಕಿದರು.</p>.<p>‘ದೇಶದ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಬೇಕು. ಲಸಿಕಾ ಕೇಂದ್ರಗಳ ಸಂಖ್ಯೆ ಹೆಚ್ಚಿಸುವ ಮೂಲಕ ಜನಜಂಗುಳಿ ನಿರ್ಮಾಣ ಆಗುವುದನ್ನು ತಪ್ಪಿಸಿ, ಈ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಒತ್ತಾಯಿಸಿದರು.</p>.<p>‘ಜಿಲ್ಲೆಗೆ ಉಸ್ತುವಾರಿ ಸಚಿವರಾಗಿರುವ ಬಿ. ಶ್ರೀರಾಮುಲು ಅವರು ಕೋವಿಡ್ ಪರಿಸ್ಥಿತಿಯಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿದ್ದು, ಕೆಲಸ ಮಾಡದೆಯೇ ಅತಿಥಿಗಳಂತೆ ಬಂದು ಹೋಗುತ್ತಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ಬಾಬು ಟೀಕಿಸಿದರು.</p>.<p>ಮಾಜಿ ಶಾಸಕ ಡಿ. ಸುಧಾಕರ್, ಮುಖಂಡರಾದ ಹಾಲೇಶಪ್ಪ, ಭೀಮಸಮುದ್ರದ ಜಿ.ಎಸ್. ಮಂಜುನಾಥ್, ಎನ್.ಡಿ. ಕುಮಾರ್, ಸಂಪತ್ಕುಮಾರ್, ಮಹಡಿ ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಕಟ್ಟಡ ಕಾರ್ಮಿಕರಿಗೆ ಸರ್ಕಾರ ಕಳೆದ ವಾರ ಘೋಷಿಸಿರುವ ₹ 525 ಕೋಟಿ ಪರಿಹಾರವೂ ಸರ್ಕಾರದಲ್ಲ. ಅದು ಕಟ್ಟಡ ಕಾರ್ಮಿಕರ ಜೀವ ವಿಮಾ ಹಣವಾಗಿದೆ. ಅದರಲ್ಲಿ ತಲಾ ₹ 3 ಸಾವಿರ ಸಹಾಯಧನ ಘೋಷಿಸಿರುವುದು ಎಷ್ಟು ಸರಿ’ ಎಂದು ಕೆಪಿಸಿಸಿ ಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಪ್ರಶ್ನಿಸಿದರು.</p>.<p>‘ಕಟ್ಟಡ ಕಾರ್ಮಿಕರು ಕಟ್ಟಿರುವ ವಿಮಾ ಕಂತಿನ ಮೊತ್ತದಲ್ಲೇ ಪರಿಹಾರ ನೀಡಲಾಗುತ್ತಿದೆಯೇ ಹೊರತು ಸರ್ಕಾರ ಪ್ರತ್ಯೇಕ ಅನುದಾನ ನೀಡಿಲ್ಲ. ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದಾರೆ. ನಿಜಕ್ಕೂ ಸರ್ಕಾರಕ್ಕೆ ಕಾಳಜಿ ಇದ್ದರೆ, ಸಂಘಟಿತ–ಅಸಂಘಟಿತ ಎನ್ನದೇ ಎಲ್ಲಾ ಕಾರ್ಮಿಕರಿಗೂ ₹ 10 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ಕಾರ್ಯಕರ್ತರು ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರ ಹೆಸರು ನೋಂದಾಯಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ’ ಎಂದ ಅವರು, ‘ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬುದಕ್ಕೆ ಬಿಜೆಪಿ ನಾಯಕರು ಸೂಕ್ತ ದಾಖಲೆ ಒದಗಿಸಬೇಕು’ ಎಂದು ಸವಾಲು ಹಾಕಿದರು.</p>.<p>‘ದೇಶದ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಬೇಕು. ಲಸಿಕಾ ಕೇಂದ್ರಗಳ ಸಂಖ್ಯೆ ಹೆಚ್ಚಿಸುವ ಮೂಲಕ ಜನಜಂಗುಳಿ ನಿರ್ಮಾಣ ಆಗುವುದನ್ನು ತಪ್ಪಿಸಿ, ಈ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಒತ್ತಾಯಿಸಿದರು.</p>.<p>‘ಜಿಲ್ಲೆಗೆ ಉಸ್ತುವಾರಿ ಸಚಿವರಾಗಿರುವ ಬಿ. ಶ್ರೀರಾಮುಲು ಅವರು ಕೋವಿಡ್ ಪರಿಸ್ಥಿತಿಯಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿದ್ದು, ಕೆಲಸ ಮಾಡದೆಯೇ ಅತಿಥಿಗಳಂತೆ ಬಂದು ಹೋಗುತ್ತಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ಬಾಬು ಟೀಕಿಸಿದರು.</p>.<p>ಮಾಜಿ ಶಾಸಕ ಡಿ. ಸುಧಾಕರ್, ಮುಖಂಡರಾದ ಹಾಲೇಶಪ್ಪ, ಭೀಮಸಮುದ್ರದ ಜಿ.ಎಸ್. ಮಂಜುನಾಥ್, ಎನ್.ಡಿ. ಕುಮಾರ್, ಸಂಪತ್ಕುಮಾರ್, ಮಹಡಿ ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>