‘ಸೋಂಕಿತರ ಸೂಕ್ತ ಚಿಕಿತ್ಸೆಗೆ ಎಲ್ಲ ಕ್ರಮವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಹೇಳುತ್ತಿದ್ದಾರೆ. ಆದರೆ, ಯಾವುದು ಕಟ್ಟುನಿಟ್ಟಾಗಿ ಜಾರಿಯಾಗುತ್ತಿಲ್ಲ. ಇದರಿಂದಾಗಿ ನಿತ್ಯ ಕೊರೊನಾ ಸೋಂಕಿತರು ಕೋವಿಡ್ ಕೇಂದ್ರಗಳ ಮುಂಭಾಗ ಆಂಬುಲೆನ್ಸ್ನೊಳಗೆ ಹಗಲು–ರಾತ್ರಿ ಕಳೆಯುವ ಸ್ಥಿತಿ ಎದುರಾಗಿದೆ’ ಎಂದು ವ್ಯವಸ್ಥೆಯನ್ನು ದೂಷಿಸಿದ್ದಾರೆ.