<p>ಚಿತ್ರದುರ್ಗ: ಜಿಲ್ಲೆಯಲ್ಲಿ ಒಂದೇ ದಿನ 71 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, 21 ಜನರಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಸೋಂಕಿತರ ಸಂಖ್ಯೆ 1,551ಕ್ಕೆ ಏರಿಕೆಯಾಗಿದೆ. ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 1065ಕ್ಕೆ ಹೆಚ್ಚಿದೆ. ಸದ್ಯ ಜಿಲ್ಲೆಯಲ್ಲಿ 466 ಸಕ್ರಿಯ ಪ್ರಕರಣಗಳಿವೆ.</p>.<p>ಸೋಮವಾರ 377 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 21 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 17 ಪ್ರಕರಣ ಬೆಳಕಿಗೆ ಬಂದಿವೆ. ಮೊಳಕಾಲ್ಮುರು 1 ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 3 ಪ್ರಕರಣ ದೃಢಪಟ್ಟಿವೆ.</p>.<p>ಜಿಲ್ಲೆಯಲ್ಲಿ 20 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 459 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 10,102 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.</p>.<p>ಈವರೆಗೆ 30,068 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,572 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 5,606 ಜನರ ವರದಿ ಬರುವುದು ಬಾಕಿ ಇದೆ. ದಿನ ಕಳೆದಂತೆ ಸೋಂಕು ಪರೀಕ್ಷೆ ವಿಳಂಬವಾಗುತ್ತಿದೆ.</p>.<p>ರ್ಯಾಪಿಡ್ ಆಂಟಿಜನ್ ಕಿಟ್ನಲ್ಲಿ 124 ಸೋಂಕಿತರು ಮತ್ತು 73 ಜನರನ್ನು ಪಿಸಿಆರ್ ಟೆಸ್ಟ್ಗೆ ಒಳಪಡಿಸಲಾಗಿದೆ. ನಿತ್ಯ ಸರಾಸರಿ 300 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆದರೆ, ಅದೇ ಪ್ರಮಾಣದ ವರದಿ ಮಾತ್ರ ಕೈಸೇರುತ್ತಿಲ್ಲ. ಇದರಿಂದ ಪರೀಕ್ಷೆಗೆ ಮಾದರಿಯನ್ನು ನೀಡಿದವರು ಆತಂಕದಲ್ಲಿ ಇರುವಂತಾಗಿದೆ.</p>.<p class="Subhead">‘ದಿಶಾ’ ಸಭೆ ರದ್ದು:</p>.<p>ಸಂಸದ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆಯಬೇಕಿದ್ದ ಕೇಂದ್ರ ಸರ್ಕಾರಿ ಪುರಸ್ಕೃತ ಯೋಜನೆಗಳ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಕೋವಿಡ್ ಕಾರಣಕ್ಕೆ ರದ್ದಾಯಿತು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರಿಗೆ ಸೋಂಕು ಕಾಣಿಸಿಕೊಂಡಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್ ಸೇರಿ ಹಲವರು ಪ್ರಾಥಮಿಕ ಸಂಪರ್ಕಿತರ ಪಟ್ಟಿಯಲ್ಲಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ಕ್ವಾರಂಟೈನ್ಗೆ ಒಳಗಾಗಿದ್ದರಿಂದ ಸಭೆಯನ್ನು ರದ್ದುಪಡಿಸಲಾಯಿತು.</p>.<p>‘ಉಪ ಕಾರ್ಯದರ್ಶಿಗೆ ಸೋಂಕು ಕಾಣಿಸಿಕೊಂಡಿದ್ದರಿಂದ ನಾನೂ ಸೇರಿ ಹಲವರು ಕ್ವಾರಂಟೈನ್ಗೆ ಒಳಗಾಗಿದ್ದೇವೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್ ಎಂದಿದೆ. ಮಂಗಳವಾರದಿಂದ ಕಚೇರಿ ಎಂದಿನಂತೆ ತೆರೆಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಟಿ.ಯೋಗೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಜಿಲ್ಲೆಯಲ್ಲಿ ಒಂದೇ ದಿನ 71 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, 21 ಜನರಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಸೋಂಕಿತರ ಸಂಖ್ಯೆ 1,551ಕ್ಕೆ ಏರಿಕೆಯಾಗಿದೆ. ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 1065ಕ್ಕೆ ಹೆಚ್ಚಿದೆ. ಸದ್ಯ ಜಿಲ್ಲೆಯಲ್ಲಿ 466 ಸಕ್ರಿಯ ಪ್ರಕರಣಗಳಿವೆ.</p>.<p>ಸೋಮವಾರ 377 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 21 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 17 ಪ್ರಕರಣ ಬೆಳಕಿಗೆ ಬಂದಿವೆ. ಮೊಳಕಾಲ್ಮುರು 1 ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 3 ಪ್ರಕರಣ ದೃಢಪಟ್ಟಿವೆ.</p>.<p>ಜಿಲ್ಲೆಯಲ್ಲಿ 20 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 459 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 10,102 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.</p>.<p>ಈವರೆಗೆ 30,068 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,572 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 5,606 ಜನರ ವರದಿ ಬರುವುದು ಬಾಕಿ ಇದೆ. ದಿನ ಕಳೆದಂತೆ ಸೋಂಕು ಪರೀಕ್ಷೆ ವಿಳಂಬವಾಗುತ್ತಿದೆ.</p>.<p>ರ್ಯಾಪಿಡ್ ಆಂಟಿಜನ್ ಕಿಟ್ನಲ್ಲಿ 124 ಸೋಂಕಿತರು ಮತ್ತು 73 ಜನರನ್ನು ಪಿಸಿಆರ್ ಟೆಸ್ಟ್ಗೆ ಒಳಪಡಿಸಲಾಗಿದೆ. ನಿತ್ಯ ಸರಾಸರಿ 300 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆದರೆ, ಅದೇ ಪ್ರಮಾಣದ ವರದಿ ಮಾತ್ರ ಕೈಸೇರುತ್ತಿಲ್ಲ. ಇದರಿಂದ ಪರೀಕ್ಷೆಗೆ ಮಾದರಿಯನ್ನು ನೀಡಿದವರು ಆತಂಕದಲ್ಲಿ ಇರುವಂತಾಗಿದೆ.</p>.<p class="Subhead">‘ದಿಶಾ’ ಸಭೆ ರದ್ದು:</p>.<p>ಸಂಸದ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆಯಬೇಕಿದ್ದ ಕೇಂದ್ರ ಸರ್ಕಾರಿ ಪುರಸ್ಕೃತ ಯೋಜನೆಗಳ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಕೋವಿಡ್ ಕಾರಣಕ್ಕೆ ರದ್ದಾಯಿತು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರಿಗೆ ಸೋಂಕು ಕಾಣಿಸಿಕೊಂಡಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್ ಸೇರಿ ಹಲವರು ಪ್ರಾಥಮಿಕ ಸಂಪರ್ಕಿತರ ಪಟ್ಟಿಯಲ್ಲಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ಕ್ವಾರಂಟೈನ್ಗೆ ಒಳಗಾಗಿದ್ದರಿಂದ ಸಭೆಯನ್ನು ರದ್ದುಪಡಿಸಲಾಯಿತು.</p>.<p>‘ಉಪ ಕಾರ್ಯದರ್ಶಿಗೆ ಸೋಂಕು ಕಾಣಿಸಿಕೊಂಡಿದ್ದರಿಂದ ನಾನೂ ಸೇರಿ ಹಲವರು ಕ್ವಾರಂಟೈನ್ಗೆ ಒಳಗಾಗಿದ್ದೇವೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್ ಎಂದಿದೆ. ಮಂಗಳವಾರದಿಂದ ಕಚೇರಿ ಎಂದಿನಂತೆ ತೆರೆಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಟಿ.ಯೋಗೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>