<p><strong>ಚಿತ್ರದುರ್ಗ:</strong> ಗೀರ್ ಹಸುವಿನ ಹಾಲು ಖರೀದಿಸುವ ಮೂಲಕ ದೇಸಿ ಹಸುಗಳ ಸಾಕಾಣೆದಾರರನ್ನು ಪ್ರೋತ್ಸಾಹಿಸಬೇಕು ಹಾಗೂ ದೇಸಿ ಗೋವುಗಳ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.</p>.<p>ಇಲ್ಲಿನ ಜೆಸಿಆರ್ ಬಡಾವಣೆಯ ಮುಖ್ಯರಸ್ತೆಯ ಸಾಯಿಬಾಬಾ ದೇಗುಲದ ಸಮೀಪ ತೆರೆದ ‘ದುರ್ಗಾಂಬಾಮೃತ ಎ2ಮಿಲ್ಕ್’ ಹಾಲಿನ ಮಳಿಗೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಸಿ ಗೋವುಗಳ ಸಂರಕ್ಷಣೆಯ ಉದ್ದೇಶದಿಂದ ಗೀರ್ ಹಸುಗಳ ಸಾಕಾಣಿಕೆದಾರರ ಸಹಕಾರ ಸಂಘ ಸ್ಥಾಪಿಸಲಾಗಿದೆ. ಹಾಲಿನ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲಾಗುವುದು. ಮುಂದೆ ಇದನ್ನು ರಾಜ್ಯಕ್ಕೆ ವಿಸ್ತರಿಸುವ ಆಲೋಚನೆ ಇದೆ. ಈ ಹಾಲಿನ ಉತ್ಪನ್ನಗಳು ರೋಗ ನಿರೋಧಕ ಶಕ್ತಿ ಹೊಂದಿವೆ’ ಎಂದು ಹೇಳಿದರು.</p>.<p>‘ಹಾಲಿನ ಗುಣಮಟ್ಟ ಪರೀಕ್ಷಿಸಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ಮಾರಾಟದ ಬೆಲೆಯನ್ನು ಲೀಟರ್ಗೆ ₹ 75 ನಿಗದಿಪಡಿಸಲಾಗಿದೆ. ಮನೆಗೆ ನೇರವಾಗಿ ತಲುಪಿಸುವ ವ್ಯವಸ್ಥೆಯೂ ಇದೆ. ಬೆಣ್ಣೆ, ತುಪ್ಪ ಸೇರಿ ಇತರ ಉಪ ಉತ್ಪನ್ನಗಳೂ ಲಭ್ಯ ಆಗಲಿವೆ. ಇವುಗಳನ್ನು ಖರೀದಿಸಿದರೆ ದೇಸಿ ತಳಿ ಸಾಕಣೆಗೆ ಪ್ರೋತ್ಸಾಹ ಸಿಗಲಿದೆ’ ಎಂದರು.</p>.<p>ಸದ್ಗುರು ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ‘ಗೋವಿನಲ್ಲಿ ದೇವರನ್ನು ಕಾಣುತ್ತೇವೆ. ಗೋವು ಸಾಕಣೆ ಮಾಡುವುದರಿಂದ ರೋಗಗಳು ಸುಳಿಯುವುದಿಲ್ಲ. ಆರೋಗ್ಯವೂ ಚೆನ್ನಾಗಿರುತ್ತದೆ’ ಎಂದು ಹೇಳಿದರು.</p>.<p>ರಾಜರಾಜೇಶ್ವರಿ ದೇವಸ್ಥಾನದ ನಾಗರಾಜ್ ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಬಾಬುರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಎಂ.ಲಿಂಗರಾಜು ಇದ್ದರು.</p>.<p>***</p>.<p>ದೇಸಿ ತಳಿಯ 85 ಗೀರ್ ಹಸುಗಳನ್ನು ಸಾಕಣೆ ಮಾಡುತ್ತಿದ್ದೇನೆ. ಆಸಕ್ತಿ ಹಾಗೂ ಶ್ರದ್ಧೆಯಿಂದ ಹೈನುಗಾರಿಕೆ ಮಾಡಿದರೆ ಯಶಸ್ಸು ಖಂಡಿತ ಸಿಗಲಿದೆ.</p>.<p><strong>ನಿಶಾನಿ ಎಂ. ಜಯಣ್ಣ, ಗೀರ್ ಹಸು ಸಾಕಣೆದಾರ</strong></p>.<p>***</p>.<p>ದೇಸಿ ಹಸುಗಳ ಉತ್ಪನ್ನ ಬಳಕೆ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಈ ಹಸು ಸಾಕಣೆಯಿಂದ ಸಾವಯವ ಕೃಷಿ ಪದ್ಧತಿಗೆ ಸಹಕಾರಿಯಾಗಲಿದೆ.</p>.<p><strong>ಟಿ.ರಘುಮೂರ್ತಿ, ಶಾಸಕ, ಚಳ್ಳಕೆರೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಗೀರ್ ಹಸುವಿನ ಹಾಲು ಖರೀದಿಸುವ ಮೂಲಕ ದೇಸಿ ಹಸುಗಳ ಸಾಕಾಣೆದಾರರನ್ನು ಪ್ರೋತ್ಸಾಹಿಸಬೇಕು ಹಾಗೂ ದೇಸಿ ಗೋವುಗಳ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.</p>.<p>ಇಲ್ಲಿನ ಜೆಸಿಆರ್ ಬಡಾವಣೆಯ ಮುಖ್ಯರಸ್ತೆಯ ಸಾಯಿಬಾಬಾ ದೇಗುಲದ ಸಮೀಪ ತೆರೆದ ‘ದುರ್ಗಾಂಬಾಮೃತ ಎ2ಮಿಲ್ಕ್’ ಹಾಲಿನ ಮಳಿಗೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಸಿ ಗೋವುಗಳ ಸಂರಕ್ಷಣೆಯ ಉದ್ದೇಶದಿಂದ ಗೀರ್ ಹಸುಗಳ ಸಾಕಾಣಿಕೆದಾರರ ಸಹಕಾರ ಸಂಘ ಸ್ಥಾಪಿಸಲಾಗಿದೆ. ಹಾಲಿನ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲಾಗುವುದು. ಮುಂದೆ ಇದನ್ನು ರಾಜ್ಯಕ್ಕೆ ವಿಸ್ತರಿಸುವ ಆಲೋಚನೆ ಇದೆ. ಈ ಹಾಲಿನ ಉತ್ಪನ್ನಗಳು ರೋಗ ನಿರೋಧಕ ಶಕ್ತಿ ಹೊಂದಿವೆ’ ಎಂದು ಹೇಳಿದರು.</p>.<p>‘ಹಾಲಿನ ಗುಣಮಟ್ಟ ಪರೀಕ್ಷಿಸಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ಮಾರಾಟದ ಬೆಲೆಯನ್ನು ಲೀಟರ್ಗೆ ₹ 75 ನಿಗದಿಪಡಿಸಲಾಗಿದೆ. ಮನೆಗೆ ನೇರವಾಗಿ ತಲುಪಿಸುವ ವ್ಯವಸ್ಥೆಯೂ ಇದೆ. ಬೆಣ್ಣೆ, ತುಪ್ಪ ಸೇರಿ ಇತರ ಉಪ ಉತ್ಪನ್ನಗಳೂ ಲಭ್ಯ ಆಗಲಿವೆ. ಇವುಗಳನ್ನು ಖರೀದಿಸಿದರೆ ದೇಸಿ ತಳಿ ಸಾಕಣೆಗೆ ಪ್ರೋತ್ಸಾಹ ಸಿಗಲಿದೆ’ ಎಂದರು.</p>.<p>ಸದ್ಗುರು ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ‘ಗೋವಿನಲ್ಲಿ ದೇವರನ್ನು ಕಾಣುತ್ತೇವೆ. ಗೋವು ಸಾಕಣೆ ಮಾಡುವುದರಿಂದ ರೋಗಗಳು ಸುಳಿಯುವುದಿಲ್ಲ. ಆರೋಗ್ಯವೂ ಚೆನ್ನಾಗಿರುತ್ತದೆ’ ಎಂದು ಹೇಳಿದರು.</p>.<p>ರಾಜರಾಜೇಶ್ವರಿ ದೇವಸ್ಥಾನದ ನಾಗರಾಜ್ ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಬಾಬುರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಎಂ.ಲಿಂಗರಾಜು ಇದ್ದರು.</p>.<p>***</p>.<p>ದೇಸಿ ತಳಿಯ 85 ಗೀರ್ ಹಸುಗಳನ್ನು ಸಾಕಣೆ ಮಾಡುತ್ತಿದ್ದೇನೆ. ಆಸಕ್ತಿ ಹಾಗೂ ಶ್ರದ್ಧೆಯಿಂದ ಹೈನುಗಾರಿಕೆ ಮಾಡಿದರೆ ಯಶಸ್ಸು ಖಂಡಿತ ಸಿಗಲಿದೆ.</p>.<p><strong>ನಿಶಾನಿ ಎಂ. ಜಯಣ್ಣ, ಗೀರ್ ಹಸು ಸಾಕಣೆದಾರ</strong></p>.<p>***</p>.<p>ದೇಸಿ ಹಸುಗಳ ಉತ್ಪನ್ನ ಬಳಕೆ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಈ ಹಸು ಸಾಕಣೆಯಿಂದ ಸಾವಯವ ಕೃಷಿ ಪದ್ಧತಿಗೆ ಸಹಕಾರಿಯಾಗಲಿದೆ.</p>.<p><strong>ಟಿ.ರಘುಮೂರ್ತಿ, ಶಾಸಕ, ಚಳ್ಳಕೆರೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>