ಪಕ್ಷ, ಧರ್ಮ ಭೇದ ಮರೆತು ಅಭಯಾಕ್ಷರ ಅಭಿಯಾನದಡಿ ರಾಜ್ಯದಲ್ಲಿ ಲಕ್ಷಾಂತರ ಗೋಪ್ರೇಮಿಗಳು ಭಾಗಿಯಾಗಿದ್ದಾರೆ. ಚಿತ್ರದುರ್ಗದಲ್ಲಿ 2018ರಲ್ಲಿ ನಡೆದ ಅಭಿಯಾನದಲ್ಲಿ ಜಿಲ್ಲೆಯ ಅನೇಕ ಮಠಾಧೀಶರು, ವಿವಿಧ ಶಾಸಕರು, ಚುನಾಯಿತ ಪ್ರತಿನಿಧಿಗಳು, ಧರ್ಮಗುರುಗಳು, ಶಿಕ್ಷಣ ತಜ್ಞರು ಬೆಂಬಲಿಸಿ, ಈ ಕಾರ್ಯಕ್ಕೆ ಪ್ರೋತ್ಸಾಹಿಸಿದ್ದಾರೆ.