ಭಾನುವಾರ ಮಧ್ಯಾಹ್ನ ಊಟ ಮುಗಿಸಿ ನಾಲ್ವರು ಕೊಠಡಿಗೆ ತೆರಳಿದ್ದರು. ಮಕ್ಕಳು ನಿದ್ದೆಗೆ ಜಾರಿದ ಬಳಿಕ ಸುಮಂಗಲ ಅವರನ್ನು ಉಸಿರುಕಟ್ಟಿಸಿ ಪವನ್ ಕೊಲೆ ಮಾಡಿದ್ದಾನೆ. ಬಳಿಕ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶವಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಂಬಂಧಿಕರು ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.