‘ಅಪಘಾತ ಸಂಭವಿಸಿದ ಜಾಗದ ಎದುರೇ ಬಾಪೂಜಿ ಶಿಕ್ಷಣ ಸಂಸ್ಥೆ ಇದೆ. ಶಾಲಾ–ಕಾಲೇಜು ಆರಂಭವಾದರೆ, ಹೆದ್ದಾರಿ ಸಂಪರ್ಕಿಸಿಯೇ ಸಂಚಾರ ನಡೆಸಬೇಕಾಗುತ್ತದೆ. ಆಗ ಇನ್ನಷ್ಟು ಅಪಘಾತ ಸಂಭವಿಸಬಹುದು. ಅದನ್ನು ತಡೆಯಲು ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸಲಿಕ್ಕಾಗಿ ಕೆಳಸೇತುವೆ ನಿರ್ಮಿಸಬೇಕು. ಅಪಘಾತ ತಡೆದು ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಇಲಾಖೆಗೆ ಗ್ರಾಮದ ಮುಖಂಡ ಸಿದ್ಧೇಶ್ ಒತ್ತಾಯಿಸಿದ್ದಾರೆ.