<p><strong>ಚಿತ್ರದುರ್ಗ</strong>: ಸಿಬಿಐನ ನಿವೃತ್ತ ಎಸ್ಪಿ ಕೆ.ವೈ.ಗುರುಪ್ರಸಾದ್ ಅವರ ₹ 97 ಲಕ್ಷ ಹಣವನ್ನು ಅಪಹರಿಸಿ ಪರಾರಿಯಾಗಿದ್ದ ಚಾಲಕ ರಮೇಶ್ನನ್ನು ಚಳ್ಳಕೆರೆ ಠಾಣೆ ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.</p>.<p>ಬೆಂಗಳೂರಿನ ಗುರುಪ್ರಸಾದ್ ಅವರು ಆ.25ರಂದು ಬಳ್ಳಾರಿಯಲ್ಲಿದ್ದ ತಮ್ಮ ಜಮೀನನ್ನು ಮಾರಾಟ ಮಾಡಿದ್ದರು. ಆ ಹಣವನ್ನು ಬಾಡಿಗೆ ಕಾರ್ನಲ್ಲಿಟ್ಟುಕೊಂಡು ಹೊರಟಿದ್ದರು. ಚಳ್ಳಕೆರೆ ಬಳಿ ಊಟ ಮಾಡಲು ಹೋಟೆಲ್ವೊಂದಕ್ಕೆ ತೆರಳಿದ್ದರು. ಈ ವೇಳೆ ಚಾಲಕ ರಮೇಶ್ ಹಣದೊಂದಿಗೆ ಪರಾರಿಯಾಗಿದ್ದ.</p>.<p>ಗುರುಪ್ರಸಾದ್ ತಕ್ಷಣವೇ ಈ ಕುರಿತು ಚಳ್ಳಕೆರೆ ಠಾಣೆಗೆ ಮಾಹಿತಿ ನೀಡಿದ್ದರು. ಮೂರು ತಂಡಗಳೊಂದಿಗೆ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಆ.26ರಂದು ಪಾವಗಡ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಈತ ಪಾವಗಡದ ಅಜ್ಜಿಯ ಮನೆಯಲ್ಲಿಟ್ಟಿದ್ದ ₹ 97 ಲಕ್ಷ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಸಿಬಿಐನ ನಿವೃತ್ತ ಎಸ್ಪಿ ಕೆ.ವೈ.ಗುರುಪ್ರಸಾದ್ ಅವರ ₹ 97 ಲಕ್ಷ ಹಣವನ್ನು ಅಪಹರಿಸಿ ಪರಾರಿಯಾಗಿದ್ದ ಚಾಲಕ ರಮೇಶ್ನನ್ನು ಚಳ್ಳಕೆರೆ ಠಾಣೆ ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.</p>.<p>ಬೆಂಗಳೂರಿನ ಗುರುಪ್ರಸಾದ್ ಅವರು ಆ.25ರಂದು ಬಳ್ಳಾರಿಯಲ್ಲಿದ್ದ ತಮ್ಮ ಜಮೀನನ್ನು ಮಾರಾಟ ಮಾಡಿದ್ದರು. ಆ ಹಣವನ್ನು ಬಾಡಿಗೆ ಕಾರ್ನಲ್ಲಿಟ್ಟುಕೊಂಡು ಹೊರಟಿದ್ದರು. ಚಳ್ಳಕೆರೆ ಬಳಿ ಊಟ ಮಾಡಲು ಹೋಟೆಲ್ವೊಂದಕ್ಕೆ ತೆರಳಿದ್ದರು. ಈ ವೇಳೆ ಚಾಲಕ ರಮೇಶ್ ಹಣದೊಂದಿಗೆ ಪರಾರಿಯಾಗಿದ್ದ.</p>.<p>ಗುರುಪ್ರಸಾದ್ ತಕ್ಷಣವೇ ಈ ಕುರಿತು ಚಳ್ಳಕೆರೆ ಠಾಣೆಗೆ ಮಾಹಿತಿ ನೀಡಿದ್ದರು. ಮೂರು ತಂಡಗಳೊಂದಿಗೆ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಆ.26ರಂದು ಪಾವಗಡ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಈತ ಪಾವಗಡದ ಅಜ್ಜಿಯ ಮನೆಯಲ್ಲಿಟ್ಟಿದ್ದ ₹ 97 ಲಕ್ಷ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>