<p><strong>ಚಿತ್ರದುರ್ಗ:</strong> ‘ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ ಅವಲೋಕಿಸಿ ಮುಸ್ಲಿಮರಿಗೂ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದರು.</p>.<p>‘ಮುಸ್ಲಿಮರಲ್ಲಿ 48 ಉಪ ಜಾತಿಗಳಿವೆ. ಅವರಲ್ಲಿಯೂ ಬಡವರಿದ್ದಾರೆ. ಪರಿಶಿಷ್ಟ ಜಾತಿ ಅಷ್ಟೇ ಅಲ್ಲ, ಹಿಂದುಳಿದ ವರ್ಗದಲ್ಲೂ ಒಳಮೀಸಲು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಜವಾಹರಲಾಲ್ ನೆಹರೂ ಮೀಸಲಾತಿಯನ್ನು ವಿರೋಧಿಸಿದ್ದರು. ಆ ಪತ್ರವನ್ನು ಪ್ರಧಾನಿ ಮೋದಿ ಈಚೆಗೆ ಬಿಡುಗಡೆ ಮಾಡಿದ್ದಾರೆ. ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಇದನ್ನು ಕಾಂಗ್ರೆಸ್ ಮರೆತಂತಿದೆ’ ಎಂದು ಕುಟುಕಿದರು. </p>.<p>‘ವಕ್ಫ್ ಆಸ್ತಿ ಸರ್ಕಾರದ್ದಲ್ಲ ಎಂದು ಸಚಿವ ಜಮೀರ್ ಅಹ್ಮದ್ ಅಹಂಕಾರದಿಂದ ಹೇಳಿದ್ದಾರೆ. ದೇಶದಲ್ಲಿನ ಎಲ್ಲ ಆಸ್ತಿಯೂ ಸರ್ಕಾರದ್ದೇ. ಜಮೀರ್, ತನ್ನ ಅಪ್ಪನ ಆಸ್ತಿ ಎಂಬಂತೆ ಮಾತನಾಡುವುದನ್ನು ನಿಲ್ಲಿಸಲಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ ಅವಲೋಕಿಸಿ ಮುಸ್ಲಿಮರಿಗೂ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದರು.</p>.<p>‘ಮುಸ್ಲಿಮರಲ್ಲಿ 48 ಉಪ ಜಾತಿಗಳಿವೆ. ಅವರಲ್ಲಿಯೂ ಬಡವರಿದ್ದಾರೆ. ಪರಿಶಿಷ್ಟ ಜಾತಿ ಅಷ್ಟೇ ಅಲ್ಲ, ಹಿಂದುಳಿದ ವರ್ಗದಲ್ಲೂ ಒಳಮೀಸಲು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಜವಾಹರಲಾಲ್ ನೆಹರೂ ಮೀಸಲಾತಿಯನ್ನು ವಿರೋಧಿಸಿದ್ದರು. ಆ ಪತ್ರವನ್ನು ಪ್ರಧಾನಿ ಮೋದಿ ಈಚೆಗೆ ಬಿಡುಗಡೆ ಮಾಡಿದ್ದಾರೆ. ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಇದನ್ನು ಕಾಂಗ್ರೆಸ್ ಮರೆತಂತಿದೆ’ ಎಂದು ಕುಟುಕಿದರು. </p>.<p>‘ವಕ್ಫ್ ಆಸ್ತಿ ಸರ್ಕಾರದ್ದಲ್ಲ ಎಂದು ಸಚಿವ ಜಮೀರ್ ಅಹ್ಮದ್ ಅಹಂಕಾರದಿಂದ ಹೇಳಿದ್ದಾರೆ. ದೇಶದಲ್ಲಿನ ಎಲ್ಲ ಆಸ್ತಿಯೂ ಸರ್ಕಾರದ್ದೇ. ಜಮೀರ್, ತನ್ನ ಅಪ್ಪನ ಆಸ್ತಿ ಎಂಬಂತೆ ಮಾತನಾಡುವುದನ್ನು ನಿಲ್ಲಿಸಲಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>