ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ಸ್ಫೋಟ: ಅಪಾರ ನಷ್ಟ

Last Updated 25 ಅಕ್ಟೋಬರ್ 2022, 5:35 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಬಾಗೂರಿನ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ ನಷ್ಟವಾಗಿದೆ.

ಅಂಗಡಿಯಲ್ಲಿದ್ದ ಹೂ, ಹಣ್ಣು, ತರಕಾರಿ ಹಾಗೂ ಹಲವು ವಸ್ತುಗಳು ಸೇರಿದಂತೆ ₹ 50,000ಕ್ಕೂ ಹೆಚ್ಚು ನಷ್ಟವಾಗಿದೆ.

‘1 ವರ್ಷದಿಂದ ಇಲ್ಲಿ ಬಾಡಿಗೆಯಲ್ಲಿ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು. ಬೆಳಗಿನ ಜಾವ ಸಿಲಿಂಡರ್‌ ಸ್ಫೋಟಗೊಂಡಿದೆ. ಬಂದು ನೋಡಿದಾಗ ಆಘಾತವಾಯಿತು. ಹಣ್ಣು, ತರಕಾರಿಯೊಂದಿಗೆ ಟಿ ವ್ಯಾಪಾರವನ್ನೂ ಮಾಡುತ್ತಿದ್ದೆ. ವ್ಯಾಪಾರ ಚೆನ್ನಾಗಿತ್ತು. ಅಂಗಡಿ ಸುಟ್ಟಿರುವುದರಿಂದ ಜೀವನ ನಡೆಸುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ’ ಎಂದು ಅಂಗಡಿ ಮಾಲೀಕ ರಮೇಶ್ ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT