<p><strong>ಹಿರಿಯೂರು:</strong> ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ಜಾರಿಮಾಡುವಾಗ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿಸಿದೆ ಎಂದು ಮಹಾನಾಯಕ ದಲಿತ ಸೇನೆ ಸಂಘಟನೆ ಆರೋಪಿಸಿದೆ.</p>.<p>ಜಸ್ಟಿಸ್ ನಾಗಮೋಹನ್ ದಾಸ್ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರಾ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ ಸಿದ್ದರಾಮಯ್ಯನವರ ಸರ್ಕಾರವು ಅಲೆಮಾರಿ ಸಮುದಾಯಗಳನ್ನು ಸ್ಪೃಷ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಅನ್ಯಾಯ ಮಾಡಿದೆ. ನಾಗಮೋಹನ್ ದಾಸ್ ವರದಿಯಲ್ಲಿರುವಂತೆ ಅಲೆಮಾರಿ ಸಮುದಾಯಗಳಿಗೆ ಶೇ 1 ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಗುರುವಾರ ಉಪವಿಭಾಗಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹಾಗೂ ತಹಶೀಲ್ದಾರ್ ಎಂ. ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ಕೆ.ಪಿ.ಶ್ರೀನಿವಾಸ್, ಬ್ಯಾಡರಹಳ್ಳಿ ಹನುಮಂತರಾಯ, ಅಬ್ಬಿನಹೊಳೆ ಜಗದೀಶ್, ಕೂನಿಕೆರೆ ಮಾರುತೇಶ್, ಖಂಡೇನಹಳ್ಳಿ ಶಿವು, ಆಲೂರು ಕಾಂತರಾಜ್, ಮರಡಿಹಳ್ಳಿ ತಿಪ್ಪೇಸ್ವಾಮಿ, ಪಟ್ರೆಹಳ್ಳಿ ಮಹೇಶ್, ಕಾಟನಾಯಕನಹಳ್ಳಿ ಮಹೇಶ್, ಬೀರೇನಹಳ್ಳಿ ಮಹಂತೇಶ್, ಹುಚ್ಚವ್ವನಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.</p>.<p>ದೊಂಬರ ವಿರೋಧ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಮಾಡಿರುವುದು ಸಂತಸದ ಸಂಗತಿಯಾಗಿದ್ದರೂ, ಅತ್ಯಂತ ಹಿಂದುಳಿದ ಹಾಗೂ ಅತ್ಯಲ್ಪರಾಗಿರುವ 59 ಜಾತಿಗಳನ್ನು ಬಲಾಢ್ಯರ ಪ್ರವರ್ಗಕ್ಕೆ ಸೇರಿಸಿರುವುದು ಸರಿಯಲ್ಲ ಎಂದು ದೊಂಬರ ಜನಾಂಗದ ಮುಖಂಡ ಡಿ.ಸಿ. ಪಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಇದು ಸುಪ್ರೀಂ ಕೋರ್ಟ್ ಮಾರ್ಗ ಸೂಚನೆಗಳ ಉಲ್ಲಂಘನೆಯಾಗಿದೆ. ಹಾಗಾಗಿ ಸರ್ಕಾರ ಕೂಡಲೇ 59 ಜಾತಿಗಳನ್ನು ಒಂದು ಪ್ರತ್ಯೇಕ ಪ್ರವರ್ಗವನ್ನಾಗಿ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ಜಾರಿಮಾಡುವಾಗ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿಸಿದೆ ಎಂದು ಮಹಾನಾಯಕ ದಲಿತ ಸೇನೆ ಸಂಘಟನೆ ಆರೋಪಿಸಿದೆ.</p>.<p>ಜಸ್ಟಿಸ್ ನಾಗಮೋಹನ್ ದಾಸ್ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರಾ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ ಸಿದ್ದರಾಮಯ್ಯನವರ ಸರ್ಕಾರವು ಅಲೆಮಾರಿ ಸಮುದಾಯಗಳನ್ನು ಸ್ಪೃಷ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಅನ್ಯಾಯ ಮಾಡಿದೆ. ನಾಗಮೋಹನ್ ದಾಸ್ ವರದಿಯಲ್ಲಿರುವಂತೆ ಅಲೆಮಾರಿ ಸಮುದಾಯಗಳಿಗೆ ಶೇ 1 ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಗುರುವಾರ ಉಪವಿಭಾಗಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹಾಗೂ ತಹಶೀಲ್ದಾರ್ ಎಂ. ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ಕೆ.ಪಿ.ಶ್ರೀನಿವಾಸ್, ಬ್ಯಾಡರಹಳ್ಳಿ ಹನುಮಂತರಾಯ, ಅಬ್ಬಿನಹೊಳೆ ಜಗದೀಶ್, ಕೂನಿಕೆರೆ ಮಾರುತೇಶ್, ಖಂಡೇನಹಳ್ಳಿ ಶಿವು, ಆಲೂರು ಕಾಂತರಾಜ್, ಮರಡಿಹಳ್ಳಿ ತಿಪ್ಪೇಸ್ವಾಮಿ, ಪಟ್ರೆಹಳ್ಳಿ ಮಹೇಶ್, ಕಾಟನಾಯಕನಹಳ್ಳಿ ಮಹೇಶ್, ಬೀರೇನಹಳ್ಳಿ ಮಹಂತೇಶ್, ಹುಚ್ಚವ್ವನಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.</p>.<p>ದೊಂಬರ ವಿರೋಧ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಮಾಡಿರುವುದು ಸಂತಸದ ಸಂಗತಿಯಾಗಿದ್ದರೂ, ಅತ್ಯಂತ ಹಿಂದುಳಿದ ಹಾಗೂ ಅತ್ಯಲ್ಪರಾಗಿರುವ 59 ಜಾತಿಗಳನ್ನು ಬಲಾಢ್ಯರ ಪ್ರವರ್ಗಕ್ಕೆ ಸೇರಿಸಿರುವುದು ಸರಿಯಲ್ಲ ಎಂದು ದೊಂಬರ ಜನಾಂಗದ ಮುಖಂಡ ಡಿ.ಸಿ. ಪಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಇದು ಸುಪ್ರೀಂ ಕೋರ್ಟ್ ಮಾರ್ಗ ಸೂಚನೆಗಳ ಉಲ್ಲಂಘನೆಯಾಗಿದೆ. ಹಾಗಾಗಿ ಸರ್ಕಾರ ಕೂಡಲೇ 59 ಜಾತಿಗಳನ್ನು ಒಂದು ಪ್ರತ್ಯೇಕ ಪ್ರವರ್ಗವನ್ನಾಗಿ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>