ಶವಸಂಸ್ಕಾರಕ್ಕೂ ಮುನ್ನ ಪೊಲೀಸರು ಮೂರು ಸುತ್ತು ಕುಶಾಲುತೋಪು ಹಾರಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಂತಿಮ ಸಂಸ್ಕಾರ ನಡೆಯುವವರೆಗೂ ಸ್ಥಳದಲ್ಲಿಯೇ ಇದ್ದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ ಪುಷ್ಪನಮನ ಸಲ್ಲಿಸಿದರು. ಅಂಸರಳ, ಸಜ್ಜನಿಕೆಯ ಅಧಿಕಾರಿಗೆ ಕಚೇರಿಯ ಸಿಬ್ಬಂದಿ ಅಶ್ರುತರ್ಪಣದೊಂದಿಗೆ ವಿದಾಯ ಹೇಳಿದರು.