<p><strong>ಚಿತ್ರದುರ್ಗ:</strong> ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲು ಮಾರ್ಗ 2027, ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p><p>ತಾಲ್ಲೂಕಿನ ಹಂಪನೂರು ಗ್ರಾಮದ ಬಳಿ ಗುರುವಾರ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p><p>'ದಾವಣಗೆರೆ- ತುಮಕೂರು ಮಾರ್ಗ ಮಾತ್ರವಲ್ಲದೇ ಗದಗ- ವಾಡಿ, ರಾಯದುರ್ಗ- ತುಮಕೂರು ಮಾರ್ಗವನ್ನೂ 2027ರ ವೇಳೆಗೆ ಪೂರ್ಣಗೊಳಿಸಲಾಗುವುದು' ಎಂದರು.</p><p>'ದಾವಣಗೆರೆಯಿಂದ ಹೆಬ್ಬಾಳ ಗ್ರಾಮದವರೆಗೆ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ. ನಾನು ಮೊಟಾರ್ ಟ್ರಾಲಿ ಮೂಲಕ ಸಂಚರಿಸಿ ಪರಿಶೀಲಿಸಿದ್ದೇನೆ. ಚಿತ್ರದುರ್ಗದ ಬಳಿ ಕಾಮಗಾರಿ ಕೊಂಚ ತಡವಾಗಿದೆ. 6 ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಿದ್ದೇನೆ' ಎಂದರು.</p><p>'ನಾನು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ರೈಲಿನಲ್ಲಿ ಹೊರಟೆ. ದಾವಣಗೆರೆ ತಲುಪಲು 5 ಗಂಟೆ ಹಿಡಿಯಿತು. ನೇರ ರೈಲು ಮಾರ್ಗ ಪೂರ್ಣಗೊಂಡರೆ ಎರಡೂವರೆ ಗಂಟೆಯಲ್ಲಿ ಬೆಂಗಳೂರು- ದಾವಣಗೆರೆ ನಡುವೆ ಓಡಾಡಬಹುದು. ಈ ರೈಲು ಮಾರ್ಗ ಬಯಲುಸೀಮೆ ಜನರ ಬಹು ಕಾಲದ ಕನಸಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲು ಮಾರ್ಗ 2027, ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p><p>ತಾಲ್ಲೂಕಿನ ಹಂಪನೂರು ಗ್ರಾಮದ ಬಳಿ ಗುರುವಾರ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p><p>'ದಾವಣಗೆರೆ- ತುಮಕೂರು ಮಾರ್ಗ ಮಾತ್ರವಲ್ಲದೇ ಗದಗ- ವಾಡಿ, ರಾಯದುರ್ಗ- ತುಮಕೂರು ಮಾರ್ಗವನ್ನೂ 2027ರ ವೇಳೆಗೆ ಪೂರ್ಣಗೊಳಿಸಲಾಗುವುದು' ಎಂದರು.</p><p>'ದಾವಣಗೆರೆಯಿಂದ ಹೆಬ್ಬಾಳ ಗ್ರಾಮದವರೆಗೆ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ. ನಾನು ಮೊಟಾರ್ ಟ್ರಾಲಿ ಮೂಲಕ ಸಂಚರಿಸಿ ಪರಿಶೀಲಿಸಿದ್ದೇನೆ. ಚಿತ್ರದುರ್ಗದ ಬಳಿ ಕಾಮಗಾರಿ ಕೊಂಚ ತಡವಾಗಿದೆ. 6 ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಿದ್ದೇನೆ' ಎಂದರು.</p><p>'ನಾನು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ರೈಲಿನಲ್ಲಿ ಹೊರಟೆ. ದಾವಣಗೆರೆ ತಲುಪಲು 5 ಗಂಟೆ ಹಿಡಿಯಿತು. ನೇರ ರೈಲು ಮಾರ್ಗ ಪೂರ್ಣಗೊಂಡರೆ ಎರಡೂವರೆ ಗಂಟೆಯಲ್ಲಿ ಬೆಂಗಳೂರು- ದಾವಣಗೆರೆ ನಡುವೆ ಓಡಾಡಬಹುದು. ಈ ರೈಲು ಮಾರ್ಗ ಬಯಲುಸೀಮೆ ಜನರ ಬಹು ಕಾಲದ ಕನಸಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>