ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಪಾಣಿ, ‘ಡಾ.ಪರಿತೋಷ್ ವಿ. ದೇಸಾಯಿ ಅವರು ವಿಶೇಷ ಫಾರ್ಮಾಜೆಟ್ ಮಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನನಗೆ ನೀಡಿದರು. ಇದೊಂದು ಅವಿಸ್ಮರಣೀಯ ಘಟನೆ. ಅತ್ಯಂತ ಪರಿಣಾಮಕಾರಿ ಲಸಿಕೆ ನಮ್ಮ ದೇಶದಲ್ಲೇ ಉತ್ಪಾದನೆ ಆಗಲಿದೆ. ಜನರನ್ನು ಭಯಗೊಳಿಸಿರುವ ಕೊರೊನಾ ಸೋಂಕು ಶೀಘ್ರದಲ್ಲೇ ಅಂತ್ಯ ಕಾಣಲಿದೆ’ ಎಂದರು.