<p><strong>ಹಿರಿಯೂರು:</strong> ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ನಾನದ ಕೊಠಡಿಯಲ್ಲಿ ಹೆರಿಗೆ ಮಾಡಿಸಿ, ನವಜಾತ ಶಿಶುವನ್ನು ಹತ್ಯೆಗೈದು ಕಿಟಕಿಯಿಂದ ಹೊರಗೆ ಎಸೆದು ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಗುರುವಾರ ಸಂಜೆ 7 ಗಂಟೆ ಸಮಯದಲ್ಲಿ ಒಬ್ಬ ಪುರುಷ ಹಾಗೂ ಮೂವರು ಮಹಿಳೆಯರು (ಗರ್ಭಿಣಿ ಸೇರಿ) ಆಸ್ಪತ್ರೆಯ ಒಳಗೆ ಪ್ರವೇಶಿಸಿದ್ದಾರೆ. ಆ ಸಮಯದಲ್ಲಿ ಜಿಟಿಜಿಟಿ ಮಳೆ ಬರುತ್ತಿದ್ದ ಕಾರಣಕ್ಕೆ ತುರ್ತು ಚಿಕಿತ್ಸಾ ಕೊಠಡಿ ಹೊರತುಪಡಿಸಿದರೆ ಬೇರೆಡೆ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಇರಲಿಲ್ಲ.</p>.<p>ಆಸ್ಪತ್ರೆಯಲ್ಲಿ ಜನರು ವಿರಳವಾಗಿರುವುದನ್ನು ಗಮನಿಸಿದ ಅವರು, ವಾರ್ಡ್ನೊಳಗೆ ತೆರಳಿ ಅಲ್ಲಿನ ಸ್ನಾನದ ಕೊಠಡಿಯಲ್ಲೇ ಹೆರಿಗೆ ಮಾಡಿಸಿ ನವಜಾತ ಶಿಶುವನ್ನು ಹತ್ಯೆ ಮಾಡಿ ಕಿಟಕಿಯಿಂದ ಹೊರಗೆ ಎಸೆದು ಅಲ್ಲಿಂದ ಪರಾರಿಯಾಗಿದ್ದಾರೆ.</p>.<p>ಮಳೆ ಬರುತ್ತಿದ್ದ ಕಾರಣಕ್ಕೆ ಬಿಸಾಡಿ ಹೋಗಿದ್ದ ಮಗುವನ್ನು ಯಾರೂ ಗಮನಿಸಿಲ್ಲ. ಇದು ಸಿ.ಸಿ. ಕ್ಯಾಮೆರಾದಲ್ಲಿ ದಾಖಲಾಗಿದೆ.</p>.<p>ಬೆಳಿಗ್ಗೆ 6 ಗಂಟೆಯ ವೇಳೆಗೆ ಸಾರ್ವಜನಿಕರು ನವಜಾತ ಶಿಶುಯ ಬಿದ್ದಿರುವುದು ಗಮನಕ್ಕೆ ಬಂದಿದೆ.</p>.<p>ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿ.ಸಿ. ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ನಾನದ ಕೊಠಡಿಯಲ್ಲಿ ಹೆರಿಗೆ ಮಾಡಿಸಿ, ನವಜಾತ ಶಿಶುವನ್ನು ಹತ್ಯೆಗೈದು ಕಿಟಕಿಯಿಂದ ಹೊರಗೆ ಎಸೆದು ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಗುರುವಾರ ಸಂಜೆ 7 ಗಂಟೆ ಸಮಯದಲ್ಲಿ ಒಬ್ಬ ಪುರುಷ ಹಾಗೂ ಮೂವರು ಮಹಿಳೆಯರು (ಗರ್ಭಿಣಿ ಸೇರಿ) ಆಸ್ಪತ್ರೆಯ ಒಳಗೆ ಪ್ರವೇಶಿಸಿದ್ದಾರೆ. ಆ ಸಮಯದಲ್ಲಿ ಜಿಟಿಜಿಟಿ ಮಳೆ ಬರುತ್ತಿದ್ದ ಕಾರಣಕ್ಕೆ ತುರ್ತು ಚಿಕಿತ್ಸಾ ಕೊಠಡಿ ಹೊರತುಪಡಿಸಿದರೆ ಬೇರೆಡೆ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಇರಲಿಲ್ಲ.</p>.<p>ಆಸ್ಪತ್ರೆಯಲ್ಲಿ ಜನರು ವಿರಳವಾಗಿರುವುದನ್ನು ಗಮನಿಸಿದ ಅವರು, ವಾರ್ಡ್ನೊಳಗೆ ತೆರಳಿ ಅಲ್ಲಿನ ಸ್ನಾನದ ಕೊಠಡಿಯಲ್ಲೇ ಹೆರಿಗೆ ಮಾಡಿಸಿ ನವಜಾತ ಶಿಶುವನ್ನು ಹತ್ಯೆ ಮಾಡಿ ಕಿಟಕಿಯಿಂದ ಹೊರಗೆ ಎಸೆದು ಅಲ್ಲಿಂದ ಪರಾರಿಯಾಗಿದ್ದಾರೆ.</p>.<p>ಮಳೆ ಬರುತ್ತಿದ್ದ ಕಾರಣಕ್ಕೆ ಬಿಸಾಡಿ ಹೋಗಿದ್ದ ಮಗುವನ್ನು ಯಾರೂ ಗಮನಿಸಿಲ್ಲ. ಇದು ಸಿ.ಸಿ. ಕ್ಯಾಮೆರಾದಲ್ಲಿ ದಾಖಲಾಗಿದೆ.</p>.<p>ಬೆಳಿಗ್ಗೆ 6 ಗಂಟೆಯ ವೇಳೆಗೆ ಸಾರ್ವಜನಿಕರು ನವಜಾತ ಶಿಶುಯ ಬಿದ್ದಿರುವುದು ಗಮನಕ್ಕೆ ಬಂದಿದೆ.</p>.<p>ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿ.ಸಿ. ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>