ಚಿತ್ರದುರ್ಗದಿಂದ ಚಳ್ಳಕೆರೆಗೆ ಸಾಗುತ್ತಿದ್ದ ಲಾರಿ ಹಾಗೂ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಲಾರಿಯ ಚಕ್ರದಡಿ ಸಿಲುಕಿದ ದ್ವಿಚಕ್ರ ವಾಹನ ನೆಲಕ್ಕೆ ಉಜ್ಜಿದೆ. ಪೆಟ್ರೋಲ್ ಟ್ಯಾಂಕ್ ತೆರೆದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಲಿಬಿಲಿಗೊಂಡ ಚಾಲಕ ಲಾರಿ ನಿಲುಗಡೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ರಸ್ತೆಯಲ್ಲಿ ಬಿದ್ದಿದ್ದು, ಒಬ್ಬರ ಕಾಲುಗಳು ತುಂಡಾಗಿದ್ದವು. ಈ ಭೀಕರ ಅಪಘಾತ ಸಾರ್ವಜನಿಕರಲ್ಲಿ ಭೀತಿಯುಂಟು ಮಾಡಿದೆ.