<p><strong>ಚಳ್ಳಕೆರೆ:</strong> ಧರಣಿ ನಡೆಸಲು ಅವಕಾಶ ನೀಡದ ಪ್ರಾಂಶುಪಾಲರ ವಿರುದ್ಧ ನಗರದ ಸರ್ಕಾರಿ ಪದವಿ ಕಾಲೇಜು ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ತಿಳಿಸಿದರು.</p>.<p>ಸರ್ಕಾರ ನೀಡುತ್ತಿರುವ ಅತ್ಯಂತ ಕಡಿಮೆ ಗೌರವಧನಕ್ಕೆ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ, ಅವಾಚ್ಯವಾಗಿ ನಿಂದಿಸಿ, ದೌರ್ಜನ್ಯ ನಡೆಸಲಾಗುತ್ತಿದೆ. ವಿನಾಕಾರಣ ಒತ್ತಡ ಹೇರುವ ಜತೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. </p>.<p>ವಿಶೇಷ ತರಗತಿ ತೆಗೆದುಕೊಂಡು ಬೋಧಿಸುತ್ತಿದ್ದರೂ ಗೌರವ ನೀಡದೆ ಅಥಿತಿ ಉಪನ್ಯಾಸಕರನ್ನು ಕಡೆಗಣಿಸಲಾಗಿದೆ. ಸರ್ಕಾರದಿಂದ ಬಿಡುಗಡೆಯಾದ ಬಾಕಿ ಗೌರವಧನ ನೀಡಲು ಪ್ರಾಂಶುಪಾಲರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಅಥಿತಿ ಉಪನ್ಯಾಸಕಿ ಶೋಭಾ ಆಕ್ರೋಶ ವ್ಯಕ್ತಪಡಿಸಿದರು. </p>.<p>ಹಲವು ಕಷ್ಟಗಳನ್ನು ನುಂಗಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ವೇತನ ಸರಿಯಾಗಿ ನೀಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರಾದ ಮಧು, ಅನಿಲ್ ಬೇಸರ ವ್ಯಕ್ತಪಡಿಸಿದರು.</p>.<p>ಉಪನ್ಯಾಸಕರಾದ ಮಹಾಂತೇಶ್, ಬ್ರಹ್ಮಾನಂದ ರೆಡ್ಡಿ, ಯರ್ರಿಸ್ವಾಮಿ, ವಲಿವುಲ್ಲಾ, ಉಪನ್ಯಾಸಕಿ ಶಿಲ್ಪಾ, ಪುಷ್ಪಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಧರಣಿ ನಡೆಸಲು ಅವಕಾಶ ನೀಡದ ಪ್ರಾಂಶುಪಾಲರ ವಿರುದ್ಧ ನಗರದ ಸರ್ಕಾರಿ ಪದವಿ ಕಾಲೇಜು ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ತಿಳಿಸಿದರು.</p>.<p>ಸರ್ಕಾರ ನೀಡುತ್ತಿರುವ ಅತ್ಯಂತ ಕಡಿಮೆ ಗೌರವಧನಕ್ಕೆ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ, ಅವಾಚ್ಯವಾಗಿ ನಿಂದಿಸಿ, ದೌರ್ಜನ್ಯ ನಡೆಸಲಾಗುತ್ತಿದೆ. ವಿನಾಕಾರಣ ಒತ್ತಡ ಹೇರುವ ಜತೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. </p>.<p>ವಿಶೇಷ ತರಗತಿ ತೆಗೆದುಕೊಂಡು ಬೋಧಿಸುತ್ತಿದ್ದರೂ ಗೌರವ ನೀಡದೆ ಅಥಿತಿ ಉಪನ್ಯಾಸಕರನ್ನು ಕಡೆಗಣಿಸಲಾಗಿದೆ. ಸರ್ಕಾರದಿಂದ ಬಿಡುಗಡೆಯಾದ ಬಾಕಿ ಗೌರವಧನ ನೀಡಲು ಪ್ರಾಂಶುಪಾಲರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಅಥಿತಿ ಉಪನ್ಯಾಸಕಿ ಶೋಭಾ ಆಕ್ರೋಶ ವ್ಯಕ್ತಪಡಿಸಿದರು. </p>.<p>ಹಲವು ಕಷ್ಟಗಳನ್ನು ನುಂಗಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ವೇತನ ಸರಿಯಾಗಿ ನೀಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರಾದ ಮಧು, ಅನಿಲ್ ಬೇಸರ ವ್ಯಕ್ತಪಡಿಸಿದರು.</p>.<p>ಉಪನ್ಯಾಸಕರಾದ ಮಹಾಂತೇಶ್, ಬ್ರಹ್ಮಾನಂದ ರೆಡ್ಡಿ, ಯರ್ರಿಸ್ವಾಮಿ, ವಲಿವುಲ್ಲಾ, ಉಪನ್ಯಾಸಕಿ ಶಿಲ್ಪಾ, ಪುಷ್ಪಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>