<p><strong>ಹಿರಿಯೂರು</strong>: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನರನ್ನು ಹೊಡೆದು ಉರುಳಿಸಿದಂತೆ ಉರುಳಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಡಾ. ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಬಂಧಿಸಬೇಕು. ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಡಿ. ಸುಧಾಕರ್ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಅವರು ಮಾತನಾಡಿದರು.</p>.<p>‘ಉನ್ನತ ಶಿಕ್ಷಣ ಖಾತೆ ಹೊಂದಿರುವ ಅಶ್ವತ್ಥ ನಾರಾಯಣ ಅವರ ಹೇಳಿಕೆ ಬಿಜೆಪಿಯವರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯವನ್ನು ಸರ್ವ ಜನಾಂಗದ ತೋಟವನ್ನಾಗಿಸುವ ಬದಲು ಹೊಡಿ–ಕಡಿ–ಬಡಿ ತಾಣವಾಗಿಸುವ ಹುನ್ನಾರ ನಡೆಸುತ್ತಿದ್ದಾರೆ. ಸಚಿವರು ರಾಜ್ಯದ ಹಿರಿಯ ರಾಜಕಾರಣಿ, ವಿಧಾನಸಭೆ ವಿರೋಧ ಪಕ್ಷದ ನಾಯಕರ ಬಗ್ಗೆ ಇಂತಹ ಹಾನಿಕಾರಕ ಹೇಳಿಕೆ ನೀಡಿದಾಕ್ಷಣ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ, ಸಚಿವರನ್ನು ಬಂಧಿಸಬೇಕಿತ್ತು’ ಎಂದರು.</p>.<p>‘ಸಂಸ್ಕಾರ, ಸಂಸ್ಕೃತಿಯ ಗಂಧವೂ ಇಲ್ಲದ ಸಚಿವರಿಗೆ ಉನ್ನತ ಶಿಕ್ಷಣ ಖಾತೆ ಕೊಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅವಮಾನಿಸಲಾಗಿದೆ. ರಾಜ್ಯಪಾಲರು ಕೊಂಚವೂ ತಡಮಾಡದೆ ಸಾಮಾಜಿಕ ಸಾಮರಸ್ಯ ಹಾಳುಮಾಡಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಶಿಕಲಾ ಸುರೇಶ್ ಬಾಬು, ಅಮೃತೇಶ್ವರಸ್ವಾಮಿ, ಆರ್. ನಾಗೇಂದ್ರನಾಯ್ಕ್, ಕಂದಿಕೆರೆ ಸುರೇಶ್ ಬಾಬು, ಗೀತಾ ಗಂಗಾಧರ್, ಖಾದಿ ರಮೇಶ್, ಈರಲಿಂಗೇಗೌಡ, ಗುಂಡೇಶ್ ಕುಮಾರ್, ಸುರೇಖಾಮಣಿ, ಎಸ್.ಆರ್. ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನರನ್ನು ಹೊಡೆದು ಉರುಳಿಸಿದಂತೆ ಉರುಳಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಡಾ. ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಬಂಧಿಸಬೇಕು. ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಡಿ. ಸುಧಾಕರ್ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಅವರು ಮಾತನಾಡಿದರು.</p>.<p>‘ಉನ್ನತ ಶಿಕ್ಷಣ ಖಾತೆ ಹೊಂದಿರುವ ಅಶ್ವತ್ಥ ನಾರಾಯಣ ಅವರ ಹೇಳಿಕೆ ಬಿಜೆಪಿಯವರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯವನ್ನು ಸರ್ವ ಜನಾಂಗದ ತೋಟವನ್ನಾಗಿಸುವ ಬದಲು ಹೊಡಿ–ಕಡಿ–ಬಡಿ ತಾಣವಾಗಿಸುವ ಹುನ್ನಾರ ನಡೆಸುತ್ತಿದ್ದಾರೆ. ಸಚಿವರು ರಾಜ್ಯದ ಹಿರಿಯ ರಾಜಕಾರಣಿ, ವಿಧಾನಸಭೆ ವಿರೋಧ ಪಕ್ಷದ ನಾಯಕರ ಬಗ್ಗೆ ಇಂತಹ ಹಾನಿಕಾರಕ ಹೇಳಿಕೆ ನೀಡಿದಾಕ್ಷಣ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ, ಸಚಿವರನ್ನು ಬಂಧಿಸಬೇಕಿತ್ತು’ ಎಂದರು.</p>.<p>‘ಸಂಸ್ಕಾರ, ಸಂಸ್ಕೃತಿಯ ಗಂಧವೂ ಇಲ್ಲದ ಸಚಿವರಿಗೆ ಉನ್ನತ ಶಿಕ್ಷಣ ಖಾತೆ ಕೊಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅವಮಾನಿಸಲಾಗಿದೆ. ರಾಜ್ಯಪಾಲರು ಕೊಂಚವೂ ತಡಮಾಡದೆ ಸಾಮಾಜಿಕ ಸಾಮರಸ್ಯ ಹಾಳುಮಾಡಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಶಿಕಲಾ ಸುರೇಶ್ ಬಾಬು, ಅಮೃತೇಶ್ವರಸ್ವಾಮಿ, ಆರ್. ನಾಗೇಂದ್ರನಾಯ್ಕ್, ಕಂದಿಕೆರೆ ಸುರೇಶ್ ಬಾಬು, ಗೀತಾ ಗಂಗಾಧರ್, ಖಾದಿ ರಮೇಶ್, ಈರಲಿಂಗೇಗೌಡ, ಗುಂಡೇಶ್ ಕುಮಾರ್, ಸುರೇಖಾಮಣಿ, ಎಸ್.ಆರ್. ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>