<p>ಚಿತ್ರದುರ್ಗ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗಿದೆ. ರೈತರು ಸತತ ಎರಡು ವರ್ಷ ಅತಿವೃಷ್ಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮಾ ಕಂತು ಪಾವತಿಸಿದ ಎಲ್ಲ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದೆ. ಸರ್ಕಾರ ಪರಿಹಾರವನ್ನು ಘೋಷಣೆ ಮಾಡಿ ಹಣ ಮಂಜೂರು ಮಾಡಿದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ರೈತರು ಬೆಳೆದ ಬೆಳೆಗೆ ನ್ಯಾಯಯುತವಾದ ಬೆಲೆ ಸಿಗುತ್ತಿಲ್ಲ. ರೈತರೇ ಬೆಲೆ ನಿಗದಿ ಮಾಡುವ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ನ್ಯಾಯಯುತವಾದ ಬೆಲೆ ಸಿಗದೇ ಇರುವುದರಿಂದ ರೈತರು ಸಾಲಗಾರರಾಗುತ್ತಿದ್ದಾರೆ. ಬೆಳೆನಷ್ಟ ಸಂಭವಿಸಿದಾಗ ಪರಿಹಾರ ಸಿಗುವ ನಿರೀಕ್ಷೆ<br />ಯಲ್ಲಿ ವಿಮೆ ಕಂತು ಪಾವತಿಸಲಾಗುತ್ತಿದೆ.ಆದರೆ, ಪರಿಹಾರ ನೀಡುವಲ್ಲಿತಾರತಮ್ಯ ಮಾಡಲಾಗುತ್ತಿದೆಎಂದು ದೂರಿದರು.</p>.<p>ಸಂಘದ ಮುಖಂಡರಾದ ಈಚಘಟ್ಟ ಸಿದ್ಧವೀರಪ್ಪ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜನ್, ರಾಮರೆಡ್ಡಿ, ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗಿದೆ. ರೈತರು ಸತತ ಎರಡು ವರ್ಷ ಅತಿವೃಷ್ಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮಾ ಕಂತು ಪಾವತಿಸಿದ ಎಲ್ಲ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದೆ. ಸರ್ಕಾರ ಪರಿಹಾರವನ್ನು ಘೋಷಣೆ ಮಾಡಿ ಹಣ ಮಂಜೂರು ಮಾಡಿದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ರೈತರು ಬೆಳೆದ ಬೆಳೆಗೆ ನ್ಯಾಯಯುತವಾದ ಬೆಲೆ ಸಿಗುತ್ತಿಲ್ಲ. ರೈತರೇ ಬೆಲೆ ನಿಗದಿ ಮಾಡುವ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ನ್ಯಾಯಯುತವಾದ ಬೆಲೆ ಸಿಗದೇ ಇರುವುದರಿಂದ ರೈತರು ಸಾಲಗಾರರಾಗುತ್ತಿದ್ದಾರೆ. ಬೆಳೆನಷ್ಟ ಸಂಭವಿಸಿದಾಗ ಪರಿಹಾರ ಸಿಗುವ ನಿರೀಕ್ಷೆ<br />ಯಲ್ಲಿ ವಿಮೆ ಕಂತು ಪಾವತಿಸಲಾಗುತ್ತಿದೆ.ಆದರೆ, ಪರಿಹಾರ ನೀಡುವಲ್ಲಿತಾರತಮ್ಯ ಮಾಡಲಾಗುತ್ತಿದೆಎಂದು ದೂರಿದರು.</p>.<p>ಸಂಘದ ಮುಖಂಡರಾದ ಈಚಘಟ್ಟ ಸಿದ್ಧವೀರಪ್ಪ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜನ್, ರಾಮರೆಡ್ಡಿ, ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>