<p>ಹಿರಿಯೂರು: ರಸಗೊಬ್ಬರ, ಡೀಸೆಲ್–ಪೆಟ್ರೋಲ್, ಅಡುಗೆ ಅನಿಲದ ಬೆಲೆ ಇಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಬಿ.ಒ. ಶಿವಕುಮಾರ್ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.</p>.<p>‘2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಪ್ರಧಾನಿ ಅವರು ಭರವಸೆ ನೀಡಿದ್ದರು. ಡೀಸೆಲ್–ಪೆಟ್ರೋಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ರಸಗೊಬ್ಬರದ ಬೆಲೆ ಏರಿಕೆಯಿಂದ ಸಣ್ಣ–ಅತಿಸಣ್ಣ ರೈತರು ಕೃಷಿಯಿಂದ ವಿಮುಖರಾಗುವ ಸನ್ನಿವೇಶ ಸೃಷ್ಟಿಯಾಗಿದೆ. 50 ಕೆ.ಜಿ. ಡಿಎಪಿ ಬೆಲೆಯನ್ನು ₹ 1,200ರಿಂದ ₹ 1,700ರ ವರೆಗೆ, 20–20–20 ಗೊಬ್ಬರದ ಬೆಲೆಯನ್ನು ₹ 925ರಿಂದ ₹ 1.350ರವರೆಗೆ, ಅಡುಗೆ ಅನಿಲದ ಬೆಲೆಯನ್ನು ₹ 300ರಿಂದ ₹ 925ರ ವರೆಗೂ ಹೆಚ್ಚಿಸಲಾಗಿದೆ’ ಎಂದು ಶಿವಕುಮಾರ್ ಆರೋಪಿಸಿದರು.</p>.<p>‘ಮೋದಿ ಅವರಿಗೆ ನಿಜವಾಗಿಯೂ ರೈತರ ಪರ ಕಾಳಜಿ ಇದ್ದರೆ ತಕ್ಷಣ ಹೆಚ್ಚಿಸಿರುವ ಬೆಲೆಗಳನ್ನು ಮೊದಲಿನ ದರಕ್ಕೆ ಇಳಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಘೋಷಿಸಿ, ಸರ್ಕಾರದಿಂದಲೇ ಖರೀದಿಸಬೇಕು. ಬೆಂಬಲ ಬೆಲೆ ನೀತಿಗೆ ಕಾನೂನು ಸ್ವರೂಪ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ವಿ.ಕಲ್ಪನಾ, ಯಳನಾಡು ಚೇತನ್, ಎಂ. ಲಕ್ಷ್ಮೀಕಾಂತ್, ಎಚ್.ಆರ್.ತಿಪ್ಪೇಸ್ವಾಮಿ, ಮೇಟಿಕುರ್ಕೆ ತಿಪ್ಪೇಸ್ವಾಮಿ, ಮಹಂತೇಶ್, ದೇವರಕೊಟ್ಟ ರಂಗಸ್ವಾಮಿ, ರಾಘವೇಂದ್ರ, ಓಬಣ್ಣ, ಹನುಮಂತರಾಯ, ವೀರಣ್ಣ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ರಸಗೊಬ್ಬರ, ಡೀಸೆಲ್–ಪೆಟ್ರೋಲ್, ಅಡುಗೆ ಅನಿಲದ ಬೆಲೆ ಇಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಬಿ.ಒ. ಶಿವಕುಮಾರ್ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.</p>.<p>‘2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಪ್ರಧಾನಿ ಅವರು ಭರವಸೆ ನೀಡಿದ್ದರು. ಡೀಸೆಲ್–ಪೆಟ್ರೋಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ರಸಗೊಬ್ಬರದ ಬೆಲೆ ಏರಿಕೆಯಿಂದ ಸಣ್ಣ–ಅತಿಸಣ್ಣ ರೈತರು ಕೃಷಿಯಿಂದ ವಿಮುಖರಾಗುವ ಸನ್ನಿವೇಶ ಸೃಷ್ಟಿಯಾಗಿದೆ. 50 ಕೆ.ಜಿ. ಡಿಎಪಿ ಬೆಲೆಯನ್ನು ₹ 1,200ರಿಂದ ₹ 1,700ರ ವರೆಗೆ, 20–20–20 ಗೊಬ್ಬರದ ಬೆಲೆಯನ್ನು ₹ 925ರಿಂದ ₹ 1.350ರವರೆಗೆ, ಅಡುಗೆ ಅನಿಲದ ಬೆಲೆಯನ್ನು ₹ 300ರಿಂದ ₹ 925ರ ವರೆಗೂ ಹೆಚ್ಚಿಸಲಾಗಿದೆ’ ಎಂದು ಶಿವಕುಮಾರ್ ಆರೋಪಿಸಿದರು.</p>.<p>‘ಮೋದಿ ಅವರಿಗೆ ನಿಜವಾಗಿಯೂ ರೈತರ ಪರ ಕಾಳಜಿ ಇದ್ದರೆ ತಕ್ಷಣ ಹೆಚ್ಚಿಸಿರುವ ಬೆಲೆಗಳನ್ನು ಮೊದಲಿನ ದರಕ್ಕೆ ಇಳಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಘೋಷಿಸಿ, ಸರ್ಕಾರದಿಂದಲೇ ಖರೀದಿಸಬೇಕು. ಬೆಂಬಲ ಬೆಲೆ ನೀತಿಗೆ ಕಾನೂನು ಸ್ವರೂಪ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ವಿ.ಕಲ್ಪನಾ, ಯಳನಾಡು ಚೇತನ್, ಎಂ. ಲಕ್ಷ್ಮೀಕಾಂತ್, ಎಚ್.ಆರ್.ತಿಪ್ಪೇಸ್ವಾಮಿ, ಮೇಟಿಕುರ್ಕೆ ತಿಪ್ಪೇಸ್ವಾಮಿ, ಮಹಂತೇಶ್, ದೇವರಕೊಟ್ಟ ರಂಗಸ್ವಾಮಿ, ರಾಘವೇಂದ್ರ, ಓಬಣ್ಣ, ಹನುಮಂತರಾಯ, ವೀರಣ್ಣ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>